ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

June 27, 2025
8:40 PM

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನವೊಂದು  ಕಲಾತ್ಮಕವಾಗಿ ಅನಾವರಣಗೊಂಡಿದೆ. ಶಿವಮೊಗ್ಗ ಜಿಲ್ಲೆಯ  ಹೊಸನಗರ ತಾಲೂಕಿನ ದೊಂಬೆಕೊಪ್ಪ ಗ್ರಾಮದ  ಸಾರಾ ಸಂಸ್ಥೆ  ಈ ಕಾರ್ಯದಲ್ಲಿ  ತೊಡಗಿಸಿಕೊಂಡಿದೆ.

Advertisement

ರಾಜ್ಯದ  ಮಲೆನಾಡು ಹಾಗೂ  ಕರಾವಳಿಯನ್ನು ಬೆಸೆದಿರುವ  ಪಶ್ಚಿಮ ಘಟ್ಟಗಳು  ಶುದ್ಧಗಾಳಿ, ಪರಿಸರ  ಹಾಗೂ  ಬೆಟ್ಟಗುಡ್ಡಗಳಿಂದ  ಗಮನ ಸೆಳೆಯುತ್ತವೆ.  ಅಭಿವೃದ್ಧಿಯ ಹೆಸರಿನಲ್ಲಿ  ಇಂತಹ  ಪ್ರಾಕೃತಿಕ ಸಂಪತ್ತು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಜೀವಿವೈವಿಧ್ಯತೆಯ ರಕ್ಷಣೆ  ಸವಾಲಿನ ಕೆಲಸವಾಗಿದೆ.  ಪರಿಸರ ಹಾಗೂ  ಜೀವಿವೈಧ್ಯತೆಯ ಮಹತ್ವವನ್ನು  ಸಾಮಾನ್ಯ ಜನರಿಗೆ  ಸರಳ ಮಾಧ್ಯಮದ ಮೂಲಕ ತಿಳಿಸುವ ಪ್ರಯತ್ನವೊಂದು ಸದ್ದಿಲ್ಲದೆ ಸಾಗಿದೆ. ಪಶ್ಚಿಮ ಘಟ್ಟಗಳ ವರ್ತಮಾನ ಮತ್ತು  ಭವಿಷ್ಯದ ಕುರಿತು  ಸೂಕ್ಷ್ಮ ಅಲೋಚನೆಗಳನ್ನು  ಅಭಿವ್ಯಕ್ತಪಡಿಸಲು  ಚಿತ್ರಕಲೆಯಂತಹ ಮಾಧ್ಯಮವನ್ನು  ಪ್ರಬಲವಾಗಿ  ಬಳಸಿಕೊಳ್ಳುವ ಪ್ರಯತ್ನ  ನಡೆದಿದ್ದು,  ಶಿವಮೊಗ್ಗ ಜಿಲ್ಲೆಯ  ಹೊಸನಗರ ತಾಲೂಕಿನ ದೊಂಬೆಕೊಪ್ಪ ಗ್ರಾಮದ  ಸಾರಾ ಸಂಸ್ಥೆ  ಈ ಕಾರ್ಯದಲ್ಲಿ  ತೊಡಗಿಸಿಕೊಂಡಿದೆ.

ಚಿತ್ರಗಳ ಮೂಲಕ  ಪಶ್ಚಿಮ ಘಟ್ಟಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅಭಿವ್ಯಕ್ತಿಸುವ  15 ದಿನಗಳ ಶಿಬಿರ  ನಡೆದಿದ್ದು,  ಬೆಟ್ಟ, ನದಿ, ಪ್ರಾಣಿ,ಪಕ್ಷಿ ಸಂಕುಲ, ವೃಕ್ಷ ಸಂಕುಲದ  ಮಹತ್ವವನ್ನು  ಸೃಜನಶೀಲವಾಗಿ  ಚಿತ್ರಗಳ ಮೂಲಕ  ಬಿಡಿಸಿರುವ ಕಲಾವಿದರು , ಸ್ಥಳೀಯರೊಂದಿಗೆ ಚಿಂತನ-ಮಂಥನದಲ್ಲೂ ಭಾಗಿಯಾಗಿದ್ದಾರೆ.

ಸಾರಾ ಸಂಸ್ಥೆ  ಪಶ್ಚಿಮ ಘಟ್ಟದ ಪ್ರಾಕೃತಿಕ ಸಂಪತ್ತು ಮತ್ತು ಸವಾಲುಗಳ ಕುರಿತು  ತನ್ನದೇ ಆದ ಸಂಶೋಧನಾತ್ಮಕ ಕೆಲಸವನ್ನು ನಿರ್ವಹಿಸುತ್ತಿದೆ.  ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ  ಹಾಗೂ ಕರ್ನಾಟಕ ಸೇರಿದಂತೆ  ವಿವಿಧ ರಾಜ್ಯಗಳ ಯುವ ಕಲಾವಿದರು  ಈ ಪ್ರಯತ್ನದಲ್ಲಿ ಕೈಜೋಡಿಸಿದ್ದಾರೆ.  ಈ ಹಿಂದೆ  ಸಾರಾ ಸಂಸ್ಥೆ  ಮಲೆನಾಡಿನ  ದೇಶೀಯ ಭತ್ತದ ತಳಿಗಳ  ರಕ್ಷಣೆ ಸೇರಿದಂತೆ  ಹಲವು  ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಚಿತ್ರಕಲಾ ಶಿಬಿರಕ್ಕೆ ವಿವಿಧ ರಾಜ್ಯಗಳಿಂದ  ಹಲವು ಕಲಾವಿದರು ಆಗಮಿಸಿದ್ದು,  ಪಶ್ಚಿಮ ಘಟ್ಟದ ಜ್ವಲಂತ ಸಮಸ್ಯೆಗಳನ್ನು  ಬಣ್ಣಗಳಲ್ಲಿ  ಬಿಡಿಸುವ ಮೂಲಕ  ಸೃಜನಶೀಲ ಅಭಿವ್ಯಕ್ತಿಗೆ  ಸಾಕ್ಷಿಯಾಗಿದ್ದಾರೆ ಎನ್ನುತ್ತಾರೆ ಸಾರಾ ಸಂಸ್ಥೆ ಮುಖ್ಯಸ್ಥ ಅರುಣ್ ಕುಮಾರ್. ತಮ್ಮ ಸಂಸ್ಥೆಯು ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಪರಂಪರೆ, ಕಲೆ, ಸಾಹಿತ್ಯ  ಹಾಗೂ ಸಂಸ್ಕೃತಿಯನ್ನು  ಪರಿಚಯಿಸುವ ಮತ್ತು  ಸಂರಕ್ಷಿಸುವ  ಕೆಲಸ ಮಾಡುತ್ತಿದೆ ಎನ್ನುತ್ತಾರೆ ಸಾರಾ ಸಂಸ್ಥೆಯ ಗುರುಮೂರ್ತಿ ವರದ ಮೂಲ.

ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಯನ್ನು ನಾಶಗೊಳಿಸುವ  ಪ್ರಯತ್ನಗಳು  ನಡೆದಿರುವುದು ಅಪಾಯಕಾರಿ ಎನ್ನುತ್ತಾರೆ ಚಿತ್ರಕಲಾವಿದ  ಮೈಸೂರಿನ ದಯಾನಂದ್. ಹಲವು ಕುತೂಹಲಗಳಿಗೆ  ಈ ಶಿಬಿರ ಸಾಕ್ಷಿಯಾಗಿದ್ದು, ಪರಿಸರ ಸಂರಕ್ಷಣೆ , ಜಾಗೃತಿಗೆ  ವೇದಿಕೆಯಾಗಿದೆ ಎನ್ನುತ್ತಾರೆ  ಶಿಬಿರಾರ್ಥಿ ಹೇಮಾಂಗಿನಿ.

ನಾಡಿನ ನೈಸರ್ಗಿಕ ಸಂಪನ್ಮೂಲದ ತೊಟ್ಟಿಲು ಎನಿಸಿರುವ  ಪಶ್ಚಿಮಘಟ್ಟಗಳನ್ನು  ಸಂರಕ್ಷಿಸುವುದು  ಮತ್ತು ಅಲ್ಲಿನ ಜೀವಿವೈವಿಧ್ಯತೆಯನ್ನು ರಕ್ಷಿಸುವುದು ಭವಿಷ್ಯದ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು,  ಎಲ್ಲರೂ  ಈ ಕುರಿತು  ಅಲೋಚಿಸುವುದು ಅಗತ್ಯ ಎಂಬ  ಸಂದೇಶವನ್ನು ಈ ಶಿಬಿರ ನೀಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ
February 20, 2026
7:10 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ
February 20, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror