ಮನೆಯ ಅಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಬೇರು ಸಹಿತ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ತಲೆಗೆ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61ವ) ಮೃತ ದುರ್ದೈವಿ.
ಮಧ್ಯಾಹ್ನ ಆದಂ ಸಾಹೇಬ್ ಮನೆಯ ಅಂಗಳದಲ್ಲಿ ನಿಂತುಕೊಂಡಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಂಗಳದ ಬದಿಯಲ್ಲಿದ್ದ ಮರ ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿತ್ತೆನ್ನಲಾಗಿದೆ. ಮರ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಏಟು ತಗಲಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಧರ್ಮಸ್ಥಳ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…