ಮನೆಯ ಅಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಬೇರು ಸಹಿತ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ತಲೆಗೆ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61ವ) ಮೃತ ದುರ್ದೈವಿ.
ಮಧ್ಯಾಹ್ನ ಆದಂ ಸಾಹೇಬ್ ಮನೆಯ ಅಂಗಳದಲ್ಲಿ ನಿಂತುಕೊಂಡಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಂಗಳದ ಬದಿಯಲ್ಲಿದ್ದ ಮರ ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿತ್ತೆನ್ನಲಾಗಿದೆ. ಮರ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಏಟು ತಗಲಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಧರ್ಮಸ್ಥಳ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…