ಮನೆಯ ಅಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಬೇರು ಸಹಿತ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ತಲೆಗೆ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61ವ) ಮೃತ ದುರ್ದೈವಿ.
ಮಧ್ಯಾಹ್ನ ಆದಂ ಸಾಹೇಬ್ ಮನೆಯ ಅಂಗಳದಲ್ಲಿ ನಿಂತುಕೊಂಡಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಂಗಳದ ಬದಿಯಲ್ಲಿದ್ದ ಮರ ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿತ್ತೆನ್ನಲಾಗಿದೆ. ಮರ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಏಟು ತಗಲಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಧರ್ಮಸ್ಥಳ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…