ಖ್ಯಾತ ಚಲನಚಿತ್ರನಟ ಪುನೀತ್ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತುಗೌರವಕ್ಕೆ ಪಾತ್ರರಾಗಿದ್ದರು. ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನುಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…