ಖ್ಯಾತ ಚಲನಚಿತ್ರನಟ ಪುನೀತ್ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತುಗೌರವಕ್ಕೆ ಪಾತ್ರರಾಗಿದ್ದರು. ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನುಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…
ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…