ಖ್ಯಾತ ಚಲನಚಿತ್ರನಟ ಪುನೀತ್ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತುಗೌರವಕ್ಕೆ ಪಾತ್ರರಾಗಿದ್ದರು. ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನುಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…