Advertisement
ಸುದ್ದಿಗಳು

ರಾಯಚೂರು ರೈತನ ವಿಭಿನ್ನ ಅಭಿಮಾನ | ಭತ್ತದ ಬೆಳೆಯಲ್ಲೇ ಮೂಡಿಬಂದ ಪುನೀತ್ ರಾಜ್‌ಕುಮಾರ್

Share

ರಾಯಚೂರು ಜಿಲ್ಲೆಯ ರೈತರೊಬ್ಬರು ಪುನೀತ್ ರಾಜಕುಮಾರ್ ಅಭಿಮಾನವನ್ನು ವಿಭಿನ್ನ ರೀತಿಯಲ್ಲಿ ಮೆರೆದಿದ್ದಾರೆ. ತಮ್ಮ ಗದ್ದೆಯಲ್ಲಿ ಭತ್ತದ ಬೆಲೆಯಲ್ಲಿ ಅಪ್ಪು ಚಿತ್ರ ನಿರ್ಮಿಸುವ ಮೂಲಕ ಅಭಿಮಾನವನ್ನು ಎತ್ತಿ ತೋರಿಸಿದ್ದಾರೆ. ಈ ರೀತಿಯ ಚಿತ್ರ ಬಿಡಿಸುವ ಮೂಲಕ ಅಪ್ಪುವಿನ ಮೇಲಿನ ಪ್ರೀತಿ ಅಭಿಮಾನವನ್ನು ವಿಶೇಷ ರೀತಿಯಲ್ಲಿ ತೋರ್ಪಡಿಸಿದ್ದಾರೆ.

Advertisement
Advertisement

ಅಪ್ಪುವಿನ ಅಭಿಮಾನಿಗಳು ಅವರ ಮೇಲಿನ ಅಭಿಮಾನವನ್ನು ಯಾವಾಗಲೂ ವಿಭಿನ್ನ ರೀತಿಯಲ್ಲಿ ತೋರ್ಪಡಿಸುತ್ತಲೇ ಇರುತ್ತಾರೆ. ಆದರೆ ಈ ರೈತನ ಅಭಿಮಾನವು ವಿಭಿನ್ನ ರೀತಿಯಲ್ಲಿ ಜನರ ಗಮನ ಸೆಳೆದಿದೆ.

Advertisement

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಡೊಣ್ಣಿ ಕ್ಯಾಂಪ್ ನ ರೈತ ಸತ್ಯನಾರಾಯಣ ಎಂಬುವವರು ತಮ್ಮ ಭತ್ತದ ಬೆಳೆಯಲ್ಲೇ ಪುನೀತ್ ರಾಜ್​ಕುಮಾರ್ ಭಾವಚಿತ್ರ ಮೂಡಿಸುವ ಮೂಲಕ 2ನೇ ವರ್ಷ ಪುಣ್ಯಸ್ಮರಣೆಗೆ ವಿಭಿನ್ನವಾಗಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ಅಪ್ಪುವಿನ ಭಾವಚಿತ್ರಕ್ಕೆ ತಕ್ಕಂತೆ ಭತ್ತ ಬೆಳೆದಿರುವ ವಿಡಿಯೋ ವೈರಲ್ ಆಗಿದೆ. ಸತ್ಯನಾರಾಯಣರಿಗೆ ಅಂಗವೈಕಲ್ಯತೆ ಇದ್ದು, ಇಂಥ ಕಾರ್ಯ ಮಾಡಿರುವುದಕ್ಕೆ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯವನ್ನು ಬರಗಾಲ ಆವರಿಸಿದೆ. ಪ್ರಸ್ತುತ ದಿನಗಳಲ್ಲಿ ವ್ಯವಸಾಯಕ್ಕೆ ಬೇಕಾಗುವಷ್ಟು ನೀರು ರೈತನಿಗೆ ದೊರಕುತ್ತಿಲ್ಲ. ಆದರೆ, ಸತ್ಯನಾರಾಯಣ ಟ್ಯಾಂಕರ್ ಅಥವಾ ಬೋರ್‌ವೆಲ್​ ಮೂಲಕ ಗದ್ದೆಗೆ ನೀರು ಹಾಯಿಸಲು ಅಂದಾಜು 3 ಲಕ್ಷ ರೂಪಾಯಿ ವೆಚ್ಚ ಮಾಡಿದ್ದಾರೆಂತೆ. 90 ದಿನದಲ್ಲಿ ಬೆಳೆಯುವ ಭತ್ತದಲ್ಲಿ ಅಪ್ಪುವಿನ ಚಿತ್ರ ಸುಂದರವಾಗಿ ರೂಪುಗೊಂಡಿದೆ. ಕರ್ನಾಟಕ ರತ್ನ ಎನ್ನುವ ಪ್ರತಿ ಅಕ್ಷರವನ್ನು 40 ಅಡಿಯೊಳಗೆ ಬಿಡಿಸಿದ್ದಾರೆ.ಸತ್ಯನಾರಾಯಣ ಅವರು ಜಪಾನ್ ತಂತ್ರಜ್ಞಾನ ಪದ್ದತಿಯಲ್ಲಿ ವಿವಿಧ ತಳಿಯ ಭತ್ತ ಬೆಳೆಯುತ್ತಿದ್ದಾರೆ. ಕರ್ನಾಟಕ ಪಕ್ಕದ ತೆಲಂಗಾಣ, ದೂರದ ಗುಜರಾತ್ ರಾಜ್ಯಗಳಿಂದ ಕಾವೇರಿ, ಗೋಲ್ಡನ್ ರೋಸ್, ಕಾಲ ಭಟ್ಟಿ ಎಂಬ ಹೆಸರಿನ 100 ಕೆ.ಜಿ ಭತ್ತದ ಬೀಜದ ತಳಿಗಳನ್ನು ಇವರು ನೆಟ್ಟಿದ್ದಾರೆ. ಸಾವಯವ ಪದ್ಧತಿ ರೂಢಿಸಿಕೊಂಡಿದ್ದಾರೆ.

Advertisement

”ಚಿಕ್ಕಂದಿನಿಂದಲೂ ನಾನು ಪುನೀತ್​ ರಾಜ್​ಕುಮಾರ್​​ ಅವರ ಅಪ್ಪಟ ಅಭಿಮಾನಿ. ಅವರ ಮೇಲಿರುವ ಅಭಿಮಾನದಿಂದ ವಿಭಿನ್ನವಾಗಿ ನಮನ ಸಲ್ಲಿಸುವ ಆಸೆ ಮೂಡಿತ್ತು. ಆಗ ತಲೆಯಲ್ಲಿ ಹೊಳೆದಿದ್ದೇ ಈ ವಿಚಾರ. ನನ್ನ ಬಳಿ ಆರು ಎಕರೆ ಜಮೀನಿದ್ದು ಎರಡು ಎಕರೆ ಜಮೀನಿನಲ್ಲಿ ಭತ್ತ ಬೆಳೆದು ಪುನೀತ್​ ರಾಜ್​ಕುಮಾರ್ ಅವರ ಭಾವಚಿತ್ರವನ್ನು ಮೂಡಿಸುವ ಕೆಲಸ ಮಾಡಿದ್ದೇನೆ. ಇದು ಮೂರು ತಿಂಗಳ ಬೆಳೆಯಾಗಿದ್ದು, ಮಳೆ ಮತ್ತು ನೀರು ಇಲ್ಲದ್ದರಿಂದ ಬೆಳೆ ಬೆಳೆಯಲು ಆರಂಭದಲ್ಲಿ ಬಹಳ ಕಷ್ಟವಾಗಿತ್ತು. ಬಾಡಿಗೆ ಟ್ಯಾಂಕರ್​ನಿಂದ ನೀರು ಹಾಕಿ ಅವರ ಈ ಭಾವಚಿತ್ರ ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆವು. ಇದಕ್ಕೆ ಸುಮಾರು 3 ಲಕ್ಷ ರೂಪಾಯಿಗೂ ಹೆಚ್ಚು ಖರ್ಚಾಗಿದೆ. ಬಹಳ ಕಷ್ಟವಾಗುತ್ತಿತ್ತು. ಆದರೂ, ಅವರ ಮೇಲಿರುವ ಅಭಿಮಾನದಿಂದ ಇಷ್ಟಪಟ್ಟು ಭತ್ತದಲ್ಲಿ ಅವರ ಭಾವಚಿತ್ರವನ್ನು ಮೂಡಿಸುವಮ ಮೂಲಕ ನಮನ ಸಲ್ಲಿಸಿರುವೆ. ಅಶ್ವೀನಿ ಪುನೀತ್​ ರಾಜ್​ಕುಮಾರ್ ಅವರು ಕೂಡ ನೋಡಿ ಖುಷಿಪಟ್ಟರು” ಎಂದು ರೈತ ಸತ್ಯನಾರಾಯಣ ಅವರು ಖುಷಿಯನ್ನು ವ್ಯಕ್ತಪಡಿಸಿಕೊಂಡರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

6 hours ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

7 hours ago

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ.…

7 hours ago

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

15 hours ago

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

1 day ago