ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ವಿಂಟಾಲಿಗೆ 7280 ರೂಪಾಯಿ ನಿಗದಿಪಡಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ತೆಗೆಯಲಾಗುವುದು. ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗವುದು. ಆದೇಶ ಹೊರಡಿಸಿದ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel