ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ವಿಂಟಾಲಿಗೆ 7280 ರೂಪಾಯಿ ನಿಗದಿಪಡಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ತೆಗೆಯಲಾಗುವುದು. ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗವುದು. ಆದೇಶ ಹೊರಡಿಸಿದ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…