ಮುಂಗಾರು ಹಂಗಾಮಿನ ಬೆಳೆಗಳು ಬೆಂಬಲ ಬೆಲೆಯಡಿ ಖರೀದಿ | ರೈತರ ಖಾತೆಗಳಿಗೆ  ನೇರ ಹಣ ವರ್ಗಾವಣೆ

September 24, 2025
10:27 PM

ಮುಂಗಾರು ಹಂಗಾಮಿನ ಬೆಳೆಗಳಾದ  ಹೆಸರು, ಉದ್ದು ಹಾಗೂ  ಎಣ್ಣೆಕಾಳುಗಳನ್ನು  ಬೆಂಬಲ ಬೆಲೆಯಡಿ ಖರೀದಿಸಲಾಗುವುದು ಎಂದು  ಕೇಂದ್ರ ಕೃಷಿ ಸಚಿವ  ಶಿವರಾಜ್ ಸಿಂಗ್ ಚೌವ್ಹಾಣ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ನಂತರ ಮಾಹಿತಿ ನೀಡಿದ ಅವರು,  ಉತ್ತರ ಪ್ರದೇಶ, ಗುಜರಾತ್  ರಾಜ್ಯಗಳ  ಮುಂಗಾರು ಬೆಳೆಗಳಾದ  ಹೆಸರು ಮತ್ತು ಎಣ್ಣೆ ಕಾಳುಗಳನ್ನು ರೈತರಿಂದ ನೇರವಾಗಿ ಖರೀದಿಸಿ, ಡಿಜಿಟಲ್  ವಹಿವಾಟಿನ ಮೂಲಕ  ರೈತರ ಖಾತೆಗಳಿಗೆ  ನೇರ ಹಣ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ,  ತ್ವರಿತ  ಹಣ  ವಿಲೇವಾರಿಗೆ ಕ್ರಮ ಕೈಗೊಳ್ಳಲು  ತಿಳಿಸಲಾಗಿದೆ. ಸುಮಾರು 13,800 ಕೋಟಿ ರೂಪಾಯಿಗಳ ಧಾನ್ಯಗಳನ್ನು ಖರೀದಿಸಲಾಗುವುದು  ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror