MIRROR FOCUS

ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ | ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲೋಕ ಸಭಾ ಚುನಾವಣೆ(Lok sabha Election) ದಿನಾಂಕ ಪ್ರಕಟಕ್ಕೆ ಕಾಯುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದ್ದು ಚುನಾವಣಾ ಬಾಂಡ್(Election bond).‌ ಚುನಾವಣಾ ಬಾಂಡ್‌ ಮಾಹಿತಿ ಹೊರ ಬೀಳುತ್ತಿದ್ದಂತೆ ದೇಶವೇ ಬೆಚ್ಚಿ ಬೀಳಿತ್ತು. ಎಲ್ಲಾ ಪಕ್ಷಗಳು ಅನಾಮಧೇಯ ಹಾಗೂ ಕೆಲ ವಿದೇಶಿ ಕಂಪೆನಿಗಳ ಹೆಸರಿನಲ್ಲೂ ಬಾಂಡ್‌ ಖರೀದಿ ನಡೆದಿದೆ. ಒಬ್ಬರ ಮೇಲೋಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದರೆ, ದೇಶದ ಪ್ರಧಾನಿ ಮೋದಿ ತುಟಿ ಬಿಚ್ಚಲಿಲ್ಲ. ಇದೀಗ  ಚುನಾವಣೆಗಳಲ್ಲಿ ಕಪ್ಪು ಹಣ(Black money) ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಮಾಡಿರುವುದನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

Advertisement

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…

5 hours ago

ಬದುಕು ಪುರಾಣ | ಅದು ‘ಎಚ್ಚರ’ದ ರೇಖೆ!

ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…

7 hours ago

ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |

ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…

7 hours ago

ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…

8 hours ago

50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ

ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…

8 hours ago

ಯುದ್ಧ……

ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ…

8 hours ago