Advertisement
MIRROR FOCUS

ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ | ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Share

ಲೋಕ ಸಭಾ ಚುನಾವಣೆ(Lok sabha Election) ದಿನಾಂಕ ಪ್ರಕಟಕ್ಕೆ ಕಾಯುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದ್ದು ಚುನಾವಣಾ ಬಾಂಡ್(Election bond).‌ ಚುನಾವಣಾ ಬಾಂಡ್‌ ಮಾಹಿತಿ ಹೊರ ಬೀಳುತ್ತಿದ್ದಂತೆ ದೇಶವೇ ಬೆಚ್ಚಿ ಬೀಳಿತ್ತು. ಎಲ್ಲಾ ಪಕ್ಷಗಳು ಅನಾಮಧೇಯ ಹಾಗೂ ಕೆಲ ವಿದೇಶಿ ಕಂಪೆನಿಗಳ ಹೆಸರಿನಲ್ಲೂ ಬಾಂಡ್‌ ಖರೀದಿ ನಡೆದಿದೆ. ಒಬ್ಬರ ಮೇಲೋಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದರೆ, ದೇಶದ ಪ್ರಧಾನಿ ಮೋದಿ ತುಟಿ ಬಿಚ್ಚಲಿಲ್ಲ. ಇದೀಗ  ಚುನಾವಣೆಗಳಲ್ಲಿ ಕಪ್ಪು ಹಣ(Black money) ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಮಾಡಿರುವುದನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

7 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago