Advertisement
MIRROR FOCUS

ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ | ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Share

ಲೋಕ ಸಭಾ ಚುನಾವಣೆ(Lok sabha Election) ದಿನಾಂಕ ಪ್ರಕಟಕ್ಕೆ ಕಾಯುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದ್ದು ಚುನಾವಣಾ ಬಾಂಡ್(Election bond).‌ ಚುನಾವಣಾ ಬಾಂಡ್‌ ಮಾಹಿತಿ ಹೊರ ಬೀಳುತ್ತಿದ್ದಂತೆ ದೇಶವೇ ಬೆಚ್ಚಿ ಬೀಳಿತ್ತು. ಎಲ್ಲಾ ಪಕ್ಷಗಳು ಅನಾಮಧೇಯ ಹಾಗೂ ಕೆಲ ವಿದೇಶಿ ಕಂಪೆನಿಗಳ ಹೆಸರಿನಲ್ಲೂ ಬಾಂಡ್‌ ಖರೀದಿ ನಡೆದಿದೆ. ಒಬ್ಬರ ಮೇಲೋಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದರೆ, ದೇಶದ ಪ್ರಧಾನಿ ಮೋದಿ ತುಟಿ ಬಿಚ್ಚಲಿಲ್ಲ. ಇದೀಗ  ಚುನಾವಣೆಗಳಲ್ಲಿ ಕಪ್ಪು ಹಣ(Black money) ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಮಾಡಿರುವುದನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

3 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

13 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

14 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago