Advertisement
MIRROR FOCUS

ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ | ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Share

ಲೋಕ ಸಭಾ ಚುನಾವಣೆ(Lok sabha Election) ದಿನಾಂಕ ಪ್ರಕಟಕ್ಕೆ ಕಾಯುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದ್ದು ಚುನಾವಣಾ ಬಾಂಡ್(Election bond).‌ ಚುನಾವಣಾ ಬಾಂಡ್‌ ಮಾಹಿತಿ ಹೊರ ಬೀಳುತ್ತಿದ್ದಂತೆ ದೇಶವೇ ಬೆಚ್ಚಿ ಬೀಳಿತ್ತು. ಎಲ್ಲಾ ಪಕ್ಷಗಳು ಅನಾಮಧೇಯ ಹಾಗೂ ಕೆಲ ವಿದೇಶಿ ಕಂಪೆನಿಗಳ ಹೆಸರಿನಲ್ಲೂ ಬಾಂಡ್‌ ಖರೀದಿ ನಡೆದಿದೆ. ಒಬ್ಬರ ಮೇಲೋಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದರೆ, ದೇಶದ ಪ್ರಧಾನಿ ಮೋದಿ ತುಟಿ ಬಿಚ್ಚಲಿಲ್ಲ. ಇದೀಗ  ಚುನಾವಣೆಗಳಲ್ಲಿ ಕಪ್ಪು ಹಣ(Black money) ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಮಾಡಿರುವುದನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago