ಲೋಕ ಸಭಾ ಚುನಾವಣೆ(Lok sabha Election) ದಿನಾಂಕ ಪ್ರಕಟಕ್ಕೆ ಕಾಯುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದ್ದು ಚುನಾವಣಾ ಬಾಂಡ್(Election bond). ಚುನಾವಣಾ ಬಾಂಡ್ ಮಾಹಿತಿ ಹೊರ ಬೀಳುತ್ತಿದ್ದಂತೆ ದೇಶವೇ ಬೆಚ್ಚಿ ಬೀಳಿತ್ತು. ಎಲ್ಲಾ ಪಕ್ಷಗಳು ಅನಾಮಧೇಯ ಹಾಗೂ ಕೆಲ ವಿದೇಶಿ ಕಂಪೆನಿಗಳ ಹೆಸರಿನಲ್ಲೂ ಬಾಂಡ್ ಖರೀದಿ ನಡೆದಿದೆ. ಒಬ್ಬರ ಮೇಲೋಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದರೆ, ದೇಶದ ಪ್ರಧಾನಿ ಮೋದಿ ತುಟಿ ಬಿಚ್ಚಲಿಲ್ಲ. ಇದೀಗ ಚುನಾವಣೆಗಳಲ್ಲಿ ಕಪ್ಪು ಹಣ(Black money) ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಮಾಡಿರುವುದನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.
ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.
3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…