Advertisement
MIRROR FOCUS

ಚುನಾವಣೆಗಳಲ್ಲಿ ಕಪ್ಪು ಹಣ ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶ | ಚುನಾವಣಾ ಬಾಂಡ್ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Share

ಲೋಕ ಸಭಾ ಚುನಾವಣೆ(Lok sabha Election) ದಿನಾಂಕ ಪ್ರಕಟಕ್ಕೆ ಕಾಯುತ್ತಿದ್ದಂತೆ ವಿರೋಧ ಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದ್ದು ಚುನಾವಣಾ ಬಾಂಡ್(Election bond).‌ ಚುನಾವಣಾ ಬಾಂಡ್‌ ಮಾಹಿತಿ ಹೊರ ಬೀಳುತ್ತಿದ್ದಂತೆ ದೇಶವೇ ಬೆಚ್ಚಿ ಬೀಳಿತ್ತು. ಎಲ್ಲಾ ಪಕ್ಷಗಳು ಅನಾಮಧೇಯ ಹಾಗೂ ಕೆಲ ವಿದೇಶಿ ಕಂಪೆನಿಗಳ ಹೆಸರಿನಲ್ಲೂ ಬಾಂಡ್‌ ಖರೀದಿ ನಡೆದಿದೆ. ಒಬ್ಬರ ಮೇಲೋಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದರೆ, ದೇಶದ ಪ್ರಧಾನಿ ಮೋದಿ ತುಟಿ ಬಿಚ್ಚಲಿಲ್ಲ. ಇದೀಗ  ಚುನಾವಣೆಗಳಲ್ಲಿ ಕಪ್ಪು ಹಣ(Black money) ನಿಗ್ರಹವೇ ಚುನಾವಣಾ ಬಾಂಡ್ ಉದ್ದೇಶವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆ ಜೊತೆಗಿನ ಸಂದರ್ಶನದಲ್ಲಿ ಮಾತನಾಡುತ್ತಾ ಚುನಾವಣಾ ಬಾಂಡ್ (Electoral Bond) ಮಾಡಿರುವುದನ್ನು ಸಮರ್ಥಿಸಿಕೊಂಡರು. ವಿಪಕ್ಷಗಳು ಚುನಾವಣೆಯಲ್ಲಿ ಸೋಲುತ್ತವೆ. ಅದನ್ನು ಮರೆಮಾಚಲು ಇವಿಎಂ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತವೆ ಅಂತ ಕಿಡಿಕಾರಿದರು.

ಚುನಾವಣಾ ಬಾಂಡ್ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಸುಳ್ಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದ ಅವರು, ಈ ವಿಷಯದಲ್ಲಿ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತವಾದಾಗ ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು. ಚುನಾವಣೆಯಲ್ಲಿ ಹಣ ಖರ್ಚಾಗುತ್ತದೆ. ಕಪ್ಪು ಹಣ (Black Money) ಚುನಾವಣೆಯಲ್ಲಿ ದೊಡ್ಡ ಶಕ್ತಿಯಾಗಿದೆ. ಈ ಕಪ್ಪು ಹಣದಿಂದ ಚುನಾವಣೆ ಮುಕ್ತ ಮಾಡಬಹುದು ಎಂದು ಯೋಚಿಸಿದ್ದೆ. ಆಗ ಚುನಾವಣಾ ಬಾಂಡ್ ಚಿಂತನೆ ಬಂತು. ನಗದು ಹಣದ ವ್ಯವಹಾರಕ್ಕೆ ಅವಕಾಶ ನೀಡಬಾರದು ಎಂದು ಬಾಂಡ್ ವ್ಯವಸ್ಥೆ ಜಾರಿ ಮಾಡಲಾಯಿತು. ಮಾಹಿತಿ ಬಹಿರಂಗಗೊಳಿಸದಿರಲು ಹಲವು ಕಾರಣಗಳಿದೆ. ಯಾರು ಯಾರಿಗೆ ಹಣ ನೀಡಿದರು ಎಂದು ಗೊತ್ತಾದ್ರೆ ರಾಜಕೀಯ ಪಕ್ಷಗಳು ಸಮಸ್ಯೆ ಮಾಡಬಹುದು. ಅಥವಾ ಜನರು ಹಣ ಕೊಡಲು ಮುಂದೆ ಬಾರದಿರಬಹುದು. ಬಾಂಡ್ ನಿಂದ ಹಣ ಎಲ್ಲಿಂದ ಬಂತು ಲೆಕ್ಕ ಸಿಗುತ್ತದೆ ಎಂದರು.

3, 000 ಕಂಪನಿ ಬಾಂಡ್ ನೀಡಿದೆ. ಅದರಲ್ಲಿ 26 ಕಂಪನಿಗಳ ವಿರುದ್ಧ ಇಡಿ ತನಿಖೆ ನಡೆಯುತ್ತಿದೆ. ಈ 26 ಕಂಪನಿಗಳಲ್ಲಿ 16 ಕಂಪನಿಗಳು ದಾಳಿ ಸಮಯದಲ್ಲಿ ಬಾಂಡ್ ಖರೀದಿಸಿವೆ. ಈ ಬಾಂಡ್ ನಲ್ಲಿ 37% ಹಣ ಬಿಜೆಪಿಗೆ ಬಂದಿದೆ, 63% ರಷ್ಟು ಹಣ ವಿರೋಧ ಪಕ್ಷಗಳಿಗೆ ಹೋಗಿದೆ. ಆದರೆ ಆರೋಪ ನಮ್ಮ ಮೇಲೆ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago