ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020 ನವೆಂಬರ್ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ ವಿಮಾನ ಲ್ಯಾಂಡ್ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.
ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್ಪ್ರೆಸ್ ವೇ ಲಕ್ನೋ- ಸುಲ್ತಾನ್ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್ಪ್ರೆಸ್ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್ಪ್ರೆಸ್ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…