Advertisement
MIRROR FOCUS

ನಕಲಿ ಬಿತ್ತನೆ ಬೀಜ ಮತ್ತು ಕ್ರಿಮಿನಾಶಕಗಳ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ

Share

ರಾಜಧಾನಿ ದೆಹಲಿಯಲ್ಲಿ ನಡೆದ ಪೂಸಾ ಕೃಷಿ ವಿಜ್ಞಾನ ಮೇಳಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಚಾಲನೆ ನೀಡಿ, ವಿವಿಧ ಕೃಷಿ ತಂತ್ರಜ್ಞಾನ ಹಾಗೂ ಪ್ರದರ್ಶನಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಮಾಡಲು ಸರ್ಕಾರ ಆದ್ಯತೆ ನೀಡಿದ್ದು, ನಕಲಿ ಬಿತ್ತನೆ ಬೀಜ ಮತ್ತು ಕ್ರಿಮಿನಾಶಕಗಳ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೇಶದ ರೈತರಿಗೆ ಇದುವರೆಗೆ ₹1 ಲಕ್ಷ 92 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಈ ಯೋಜನೆ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ರಕ್ಷಣೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು. ರೈತರಿಗೆ ಸುಲಭವಾಗಿ ಕೃಷಿ ಸಾಲ ದೊರೆಯಲು ವಿಶೇಷ ಗುರುತಿನ ಚೀಟಿ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಇದು ರೈತರಿಗೆ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಕೃಷಿಯನ್ನು ಆಧುನಿಕಗೊಳಿಸಲು ಯಾಂತ್ರೀಕರಣ, ಹನಿ ನೀರಾವರಿ, ತುಂತುರು ನೀರಾವರಿ, ಪಾಲಿಹೌಸ್ ಮತ್ತು ಗ್ರೀನ್‌ಹೌಸ್ ತಂತ್ರಜ್ಞಾನಗಳ ಬಳಕೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇದರಿಂದ ಇಳುವರಿ ಹೆಚ್ಚಳ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸರ್ಕಾರದ ವಿವಿಧ ಕೃಷಿ ಯೋಜನೆಗಳನ್ನು ದೇಶದ ಪ್ರತಿಯೊಬ್ಬ ರೈತನಿಗೂ ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ತಂತ್ರಜ್ಞಾನ ಬಳಕೆ ಹಾಗೂ ನವೀನ ಕ್ರಮಗಳನ್ನು ಮುಂದುವರಿಸಲಾಗುವುದು ಎಂದರು.

Union Agriculture Minister Shivraj Singh Chouhan inaugurated the Pusa Krishi Vigyan Mela in New Delhi and stated that ₹1.92 lakh crore has been released to farmers under the PM Fasal Bima Yojana. The government is also promoting modern agriculture, ensuring fertilizer supply, and implementing schemes to increase farmers’ income.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

4 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

4 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

17 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago