ಪುಷ್ಪಗಿರಿ ತಪ್ಪಲು ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ | ಈಗ ಹೈಕೋರ್ಟ್‌ ಗಮನಕ್ಕೆ…!

July 29, 2021
11:08 PM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ,  ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು  ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್‌ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ  ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್‌ ನಿರ್ದೇಶನ ನೀಡಿದೆ.

ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ   ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್‌ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ ಎಸ್‌ ಓಕ್‌ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror