ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…