ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…