ಚುನಾವಣಾ ಕಣ | ಮತ್ತೆ #PuttilaForPuttur ಟ್ವಿಟ್ಟರ್‌ ಅಭಿಯಾನ | ನೂರಾರು ಜನರಿಂದ ಟ್ವಿಟ್ಟರ್‌ ಪೋಸ್ಟ್‌ | ಪುತ್ತೂರಿಗೆ ಯಾರು ? | ಸುಳ್ಯಕ್ಕೆ ಮತ್ತೆ ಎಸ್‌ ಅಂಗಾರ ?

April 11, 2023
10:46 AM

ಚುನಾವಣಾ ಕಣ ಈಗ ಚುರುಕಾಗುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಕೊನೆಯ ಹಂತದಲ್ಲಿದೆ. ಕೊನೆಯ ಕ್ಷಣದಲ್ಲೂ ಪ್ರಯತ್ನಗಳು ಸಾಗಿವೆ. ಇದೀಗ ಪುತ್ತೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಟಿಕೆಟ್‌ ಸಿಗಬೇಕು ಎಂಬ ಅಭಿಯಾನ, ಒತ್ತಡ ಹೆಚ್ಚಿದೆ. #PuttilaForPuttur ಎಂಬ ಟ್ವಿಟ್ಟರ್‌ ಅಭಿಯಾನ  ಸದ್ದು ಮಾಡುತ್ತಿದೆ. ಈ ಹಿಂದೆಯೂ ಟ್ವಿಟ್ಟರ್‌ ಅಭಿಯಾನ ಸದ್ದು ಮಾಡಿತ್ತು. ಇದೀಗ ಮತ್ತೆ ನೂರಾರು ಜನರು ಟ್ವೀಟ್‌ ಮಾಡುತ್ತಿದ್ದಾರೆ. ಕರ್ನಾಟಕದ ಸುದ್ದಿಗಳಲ್ಲಿ ಈಗ ಸುದ್ದಿಯಾಗಿರುವ ಸಂಗತಿಯಾಗಿದೆ.

Advertisement
Advertisement

ಈಚೆಗೆ ನಡೆದ ಬೆಳವಣಿಗೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆಯಾಗಿದೆ. ಅದರಲ್ಲಿ  ಪುತ್ತೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಹಾಲಿ ಶಾಸಕರುಗಳನ್ನೇ ಅಂತಿಮ ಮಾಡುವ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ. ಪುತ್ತೂರಿನಲ್ಲಿ ಚುನಾವಣೆಯ ಹೊತ್ತಿನಲ್ಲಿ ಆರೋಪಗಳು ಬಂದ ಹಿನ್ನೆಲೆಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕೇಳಿಬಂದಿದೆ. ಇದಕ್ಕಾಗಿ ಆಕಾಂಕ್ಷಿಗಳ ಪಟ್ಟಿ, ಜಾತೀವಾರು ಪಟ್ಟಿಗಳು ಮುನ್ನೆಲೆಗೆ ಬರುವ ಸಂದರ್ಭದಲ್ಲಿ ಪುತ್ತಿಲ ಅಭಿಮಾನಿಗಳು, ಕೆಲ ಕಾರ್ಯಕರ್ತರು ಟ್ವೀಟ್‌ ಮೂಲಕ ಗಮನಸೆಳೆಯುತ್ತಿದ್ದಾರೆ. ಇದೀಗ ಟ್ವಿಟ್ಟರ್‌ ಅಭಿಯಾನ ಚುರುಕಾಗಿದೆ.

Advertisement

ಸುಳ್ಯ ಕ್ಷೇತ್ರದಲ್ಲೂ ಅಭ್ಯರ್ಥಿ ಬದಲಾವಣೆಯ ಬಗ್ಗೆ ನಿನ್ನೆ ಬಿಡುಗಡೆಯಾಗಬೇಕಿದ್ದ ಬಿಜೆಪಿಯ ಪಟ್ಟಿಯ ಮೂಲಕವೂ ಗಮನ ಸಳೆದಿತ್ತು, ಆದರೆ ಕೊನೆಯ ಕ್ಷಣದಲ್ಲಿ ಮತ್ತೆ ಹಾಲಿ ಶಾಸಕರುಗಳಿಗೇ ಟಿಕೆಟ್‌ ಘೋಷಣೆಯ ಸಂದರ್ಭದಲ್ಲಿ  ಮತ್ತೆ ಅಂಗಾರ ಅವರಿಗೇ ಟಿಕೆಟ್‌ ಲಭ್ಯವಾಗುವ ಸಾಧ್ಯತೆಯ ಬಗ್ಗೆ ಕೇಳಿಬಂದಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group