ಚುನಾವಣಾ ಕಣ ಈಗ ಚುರುಕಾಗುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಕೊನೆಯ ಹಂತದಲ್ಲಿದೆ. ಕೊನೆಯ ಕ್ಷಣದಲ್ಲೂ ಪ್ರಯತ್ನಗಳು ಸಾಗಿವೆ. ಇದೀಗ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ಸಿಗಬೇಕು ಎಂಬ ಅಭಿಯಾನ, ಒತ್ತಡ ಹೆಚ್ಚಿದೆ. #PuttilaForPuttur ಎಂಬ ಟ್ವಿಟ್ಟರ್ ಅಭಿಯಾನ ಸದ್ದು ಮಾಡುತ್ತಿದೆ. ಈ ಹಿಂದೆಯೂ ಟ್ವಿಟ್ಟರ್ ಅಭಿಯಾನ ಸದ್ದು ಮಾಡಿತ್ತು. ಇದೀಗ ಮತ್ತೆ ನೂರಾರು ಜನರು ಟ್ವೀಟ್ ಮಾಡುತ್ತಿದ್ದಾರೆ. ಕರ್ನಾಟಕದ ಸುದ್ದಿಗಳಲ್ಲಿ ಈಗ ಸುದ್ದಿಯಾಗಿರುವ ಸಂಗತಿಯಾಗಿದೆ.
ಈಚೆಗೆ ನಡೆದ ಬೆಳವಣಿಗೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಅದರಲ್ಲಿ ಪುತ್ತೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಹಾಲಿ ಶಾಸಕರುಗಳನ್ನೇ ಅಂತಿಮ ಮಾಡುವ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ. ಪುತ್ತೂರಿನಲ್ಲಿ ಚುನಾವಣೆಯ ಹೊತ್ತಿನಲ್ಲಿ ಆರೋಪಗಳು ಬಂದ ಹಿನ್ನೆಲೆಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕೇಳಿಬಂದಿದೆ. ಇದಕ್ಕಾಗಿ ಆಕಾಂಕ್ಷಿಗಳ ಪಟ್ಟಿ, ಜಾತೀವಾರು ಪಟ್ಟಿಗಳು ಮುನ್ನೆಲೆಗೆ ಬರುವ ಸಂದರ್ಭದಲ್ಲಿ ಪುತ್ತಿಲ ಅಭಿಮಾನಿಗಳು, ಕೆಲ ಕಾರ್ಯಕರ್ತರು ಟ್ವೀಟ್ ಮೂಲಕ ಗಮನಸೆಳೆಯುತ್ತಿದ್ದಾರೆ. ಇದೀಗ ಟ್ವಿಟ್ಟರ್ ಅಭಿಯಾನ ಚುರುಕಾಗಿದೆ.
ಸುಳ್ಯ ಕ್ಷೇತ್ರದಲ್ಲೂ ಅಭ್ಯರ್ಥಿ ಬದಲಾವಣೆಯ ಬಗ್ಗೆ ನಿನ್ನೆ ಬಿಡುಗಡೆಯಾಗಬೇಕಿದ್ದ ಬಿಜೆಪಿಯ ಪಟ್ಟಿಯ ಮೂಲಕವೂ ಗಮನ ಸಳೆದಿತ್ತು, ಆದರೆ ಕೊನೆಯ ಕ್ಷಣದಲ್ಲಿ ಮತ್ತೆ ಹಾಲಿ ಶಾಸಕರುಗಳಿಗೇ ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ಮತ್ತೆ ಅಂಗಾರ ಅವರಿಗೇ ಟಿಕೆಟ್ ಲಭ್ಯವಾಗುವ ಸಾಧ್ಯತೆಯ ಬಗ್ಗೆ ಕೇಳಿಬಂದಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…