ಚುನಾವಣಾ ಕಣ ಈಗ ಚುರುಕಾಗುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಕೊನೆಯ ಹಂತದಲ್ಲಿದೆ. ಕೊನೆಯ ಕ್ಷಣದಲ್ಲೂ ಪ್ರಯತ್ನಗಳು ಸಾಗಿವೆ. ಇದೀಗ ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ಸಿಗಬೇಕು ಎಂಬ ಅಭಿಯಾನ, ಒತ್ತಡ ಹೆಚ್ಚಿದೆ. #PuttilaForPuttur ಎಂಬ ಟ್ವಿಟ್ಟರ್ ಅಭಿಯಾನ ಸದ್ದು ಮಾಡುತ್ತಿದೆ. ಈ ಹಿಂದೆಯೂ ಟ್ವಿಟ್ಟರ್ ಅಭಿಯಾನ ಸದ್ದು ಮಾಡಿತ್ತು. ಇದೀಗ ಮತ್ತೆ ನೂರಾರು ಜನರು ಟ್ವೀಟ್ ಮಾಡುತ್ತಿದ್ದಾರೆ. ಕರ್ನಾಟಕದ ಸುದ್ದಿಗಳಲ್ಲಿ ಈಗ ಸುದ್ದಿಯಾಗಿರುವ ಸಂಗತಿಯಾಗಿದೆ.
ಈಚೆಗೆ ನಡೆದ ಬೆಳವಣಿಗೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ. ಅದರಲ್ಲಿ ಪುತ್ತೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಹಾಲಿ ಶಾಸಕರುಗಳನ್ನೇ ಅಂತಿಮ ಮಾಡುವ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ. ಪುತ್ತೂರಿನಲ್ಲಿ ಚುನಾವಣೆಯ ಹೊತ್ತಿನಲ್ಲಿ ಆರೋಪಗಳು ಬಂದ ಹಿನ್ನೆಲೆಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕೇಳಿಬಂದಿದೆ. ಇದಕ್ಕಾಗಿ ಆಕಾಂಕ್ಷಿಗಳ ಪಟ್ಟಿ, ಜಾತೀವಾರು ಪಟ್ಟಿಗಳು ಮುನ್ನೆಲೆಗೆ ಬರುವ ಸಂದರ್ಭದಲ್ಲಿ ಪುತ್ತಿಲ ಅಭಿಮಾನಿಗಳು, ಕೆಲ ಕಾರ್ಯಕರ್ತರು ಟ್ವೀಟ್ ಮೂಲಕ ಗಮನಸೆಳೆಯುತ್ತಿದ್ದಾರೆ. ಇದೀಗ ಟ್ವಿಟ್ಟರ್ ಅಭಿಯಾನ ಚುರುಕಾಗಿದೆ.
ಸುಳ್ಯ ಕ್ಷೇತ್ರದಲ್ಲೂ ಅಭ್ಯರ್ಥಿ ಬದಲಾವಣೆಯ ಬಗ್ಗೆ ನಿನ್ನೆ ಬಿಡುಗಡೆಯಾಗಬೇಕಿದ್ದ ಬಿಜೆಪಿಯ ಪಟ್ಟಿಯ ಮೂಲಕವೂ ಗಮನ ಸಳೆದಿತ್ತು, ಆದರೆ ಕೊನೆಯ ಕ್ಷಣದಲ್ಲಿ ಮತ್ತೆ ಹಾಲಿ ಶಾಸಕರುಗಳಿಗೇ ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ಮತ್ತೆ ಅಂಗಾರ ಅವರಿಗೇ ಟಿಕೆಟ್ ಲಭ್ಯವಾಗುವ ಸಾಧ್ಯತೆಯ ಬಗ್ಗೆ ಕೇಳಿಬಂದಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…