Advertisement
ಸುದ್ದಿಗಳು

ಚುನಾವಣಾ ಕಣ | ಮತ್ತೆ #PuttilaForPuttur ಟ್ವಿಟ್ಟರ್‌ ಅಭಿಯಾನ | ನೂರಾರು ಜನರಿಂದ ಟ್ವಿಟ್ಟರ್‌ ಪೋಸ್ಟ್‌ | ಪುತ್ತೂರಿಗೆ ಯಾರು ? | ಸುಳ್ಯಕ್ಕೆ ಮತ್ತೆ ಎಸ್‌ ಅಂಗಾರ ?

Share

ಚುನಾವಣಾ ಕಣ ಈಗ ಚುರುಕಾಗುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗೆ ಕೊನೆಯ ಹಂತದಲ್ಲಿದೆ. ಕೊನೆಯ ಕ್ಷಣದಲ್ಲೂ ಪ್ರಯತ್ನಗಳು ಸಾಗಿವೆ. ಇದೀಗ ಪುತ್ತೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಟಿಕೆಟ್‌ ಸಿಗಬೇಕು ಎಂಬ ಅಭಿಯಾನ, ಒತ್ತಡ ಹೆಚ್ಚಿದೆ. #PuttilaForPuttur ಎಂಬ ಟ್ವಿಟ್ಟರ್‌ ಅಭಿಯಾನ  ಸದ್ದು ಮಾಡುತ್ತಿದೆ. ಈ ಹಿಂದೆಯೂ ಟ್ವಿಟ್ಟರ್‌ ಅಭಿಯಾನ ಸದ್ದು ಮಾಡಿತ್ತು. ಇದೀಗ ಮತ್ತೆ ನೂರಾರು ಜನರು ಟ್ವೀಟ್‌ ಮಾಡುತ್ತಿದ್ದಾರೆ. ಕರ್ನಾಟಕದ ಸುದ್ದಿಗಳಲ್ಲಿ ಈಗ ಸುದ್ದಿಯಾಗಿರುವ ಸಂಗತಿಯಾಗಿದೆ.

ಈಚೆಗೆ ನಡೆದ ಬೆಳವಣಿಗೆಯಲ್ಲಿ ಹಾಲಿ ಶಾಸಕರು, ಸಚಿವರಿಗೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆಯಾಗಿದೆ. ಅದರಲ್ಲಿ  ಪುತ್ತೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಹಾಲಿ ಶಾಸಕರುಗಳನ್ನೇ ಅಂತಿಮ ಮಾಡುವ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ. ಪುತ್ತೂರಿನಲ್ಲಿ ಚುನಾವಣೆಯ ಹೊತ್ತಿನಲ್ಲಿ ಆರೋಪಗಳು ಬಂದ ಹಿನ್ನೆಲೆಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕೇಳಿಬಂದಿದೆ. ಇದಕ್ಕಾಗಿ ಆಕಾಂಕ್ಷಿಗಳ ಪಟ್ಟಿ, ಜಾತೀವಾರು ಪಟ್ಟಿಗಳು ಮುನ್ನೆಲೆಗೆ ಬರುವ ಸಂದರ್ಭದಲ್ಲಿ ಪುತ್ತಿಲ ಅಭಿಮಾನಿಗಳು, ಕೆಲ ಕಾರ್ಯಕರ್ತರು ಟ್ವೀಟ್‌ ಮೂಲಕ ಗಮನಸೆಳೆಯುತ್ತಿದ್ದಾರೆ. ಇದೀಗ ಟ್ವಿಟ್ಟರ್‌ ಅಭಿಯಾನ ಚುರುಕಾಗಿದೆ.

ಸುಳ್ಯ ಕ್ಷೇತ್ರದಲ್ಲೂ ಅಭ್ಯರ್ಥಿ ಬದಲಾವಣೆಯ ಬಗ್ಗೆ ನಿನ್ನೆ ಬಿಡುಗಡೆಯಾಗಬೇಕಿದ್ದ ಬಿಜೆಪಿಯ ಪಟ್ಟಿಯ ಮೂಲಕವೂ ಗಮನ ಸಳೆದಿತ್ತು, ಆದರೆ ಕೊನೆಯ ಕ್ಷಣದಲ್ಲಿ ಮತ್ತೆ ಹಾಲಿ ಶಾಸಕರುಗಳಿಗೇ ಟಿಕೆಟ್‌ ಘೋಷಣೆಯ ಸಂದರ್ಭದಲ್ಲಿ  ಮತ್ತೆ ಅಂಗಾರ ಅವರಿಗೇ ಟಿಕೆಟ್‌ ಲಭ್ಯವಾಗುವ ಸಾಧ್ಯತೆಯ ಬಗ್ಗೆ ಕೇಳಿಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago