ಸುದ್ದಿಗಳು

ಸೇವಾ ಯಜ್ಞದಲ್ಲಿ ಪುತ್ತಿಲ ಪರಿವಾರ | ಸುಳ್ಯದಲ್ಲಿ ಪ್ಲಾಸ್ಟಿಕ್ ಹೊದಿಕೆಯ ಮನೆ | ಮನೆ ನಿರ್ಮಿಸುವ ಯೋಜನೆ ಹಾಕಿಕೊಂಡ ಪುತ್ತಿಲ ಪರಿವಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಮಾಜಮುಖಿ ಕಾರ್ಯಗಳಲ್ಲಿ ಪುತ್ತಿಲ ಪರಿವಾರ ಮತ್ತಷ್ಟು ಸಕ್ರಿಯವಾಗಿದೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ಪುತ್ತಿಲ ಪರಿವಾರ ತೊಡಗಿಸಿಕೊಂಡಿದೆ. ಅಶಕ್ತರಿಗೆ ನೆರವಾಗುವ ಮೂಲಕ ಮಾನವೀಯ ಸೇವಾ ಕಾರ್ಯದಲ್ಲಿದೆ. ಇದೀಗ ಸುಳ್ಯದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಮಹಿಳೆಯೋರ್ವರು ಪ್ಲಾಸ್ಟಿಕ್ ಹೊದಿಕೆಯ ಮನೆಯಲ್ಲಿ ತನ್ನ ಮೂವರು ಮಕ್ಕಳ ಜೊತೆ ವಾಸಿಸುತಿದ್ದಾರೆ. ಇದಕ್ಕಾಗು ಶಾಶ್ವತ ಮನೆ ನಿರ್ಮಾಣ ಯೋಜನೆಯ ಗುರಿಯನ್ನು ಪುತ್ತಿಲ ಪರಿವಾರ ಇರಿಸಿಕೊಂಡಿದೆ.

Advertisement

ಸುಳ್ಯ ನಗರದ ಶಾಂತಿನಗರದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಮಹಿಳೆಯೋರ್ವರು ಪ್ಲಾಸ್ಟಿಕ್ ಹೊದಿಕೆಯ ಮನೆಯಲ್ಲಿ ತನ್ನ ಮೂವರು ಮಕ್ಕಳ ಜೊತೆ ವಾಸಿಸುತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಇವರ ಸಮಸ್ಯೆ ಬಗ್ಗೆ ಮಾತುಕತೆ ನಡೆಸಿ ಸುಳ್ಯ ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್ ಜೊತೆ ಮಾತನಾಡಿದರು. ಮನೆಗೆ ಸಂಬಂಧಿಸಿದ ದಾಖಲೆ ಪತ್ರಗಳ ಸಮಸ್ಯೆ ಇತ್ಯರ್ಥ ಆದ ತಕ್ಷಣ ಇಲಾಖೆಯ ಸಹಾಯದಿಂದ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಮನೆ ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದಾರೆ.

ಈ ಸಂದರ್ಭ ಅರುಣ್ ಕುಮಾರ್‌ ಪುತ್ತಿಲ ,ಸುಧಾಕರ್ ಬಾಟೋಳಿಮೂಲೆ ಅಲೆಟ್ಟಿ, ದಿನೇಶ್ ಅಡ್ಕಾರ್ ಸಹಿತ ಹಲವು ಪ್ರಮುಖರು ಇದ್ದರು.

ಇದೇ ವೇಳೆ ಪುತ್ತಿಲ ಪರಿವಾರದ ಸದಸ್ಯ ಮುಂಡೂರು ಗ್ರಾಮದ ಪುತ್ತಿಲ ನಿವಾಸಿಯಾಗಿರುವ ಸತೀಶ ಅವರಿಗೆ ಅನಾರೋಗ್ಯದ ನಿಮಿತ್ತ ಪುತ್ತಿಲ ಪರಿವಾರದ ಸೇವಾ ಸಮರ್ಪಣೆಯ ಭಾಗವಾಗಿ ಸಂಗ್ರಹಿಸಲಾದ ಸಹಾಯಧನವನ್ನು ಮಂಗಳವಾರ ವಿತರಣೆ ಮಾಡಲಾಗಿದೆ. ಪುತ್ತಿಲ ಪರಿವಾರದ ಸದಸ್ಯರು ಮನೆಗೆ ಭೇಟಿ ಮಾಡಿ ಸಹಾಯಧನವನ್ನು ಸತೀಶ್ ರವರಿಗೆ ವಿತರಿಸಿದರು.

Advertisement

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಸುದೀರ್ ಶೆಟ್ಟಿ ನೇಸರ, ಅನಿಲ್ ಕುಮಾರ್ ಕನ್ನಾರ್ನೂಜಿ, ಬಾಲಚಂದ್ರ ಸೊರಕೆ, ಅಶೋಕ್ ನಾಯ್ಕ್ ಪುತ್ತಿಲ, ಪ್ರಸಾದ್ ಪುತ್ತಿಲ, ಧನಂಜಯ ಕಲ್ಲಮ, ಜನಾರ್ಧನ ಎ, ಮೋನಪ್ಪ ಗೌಡ, ಹರೀಶ್ ನಾಯ್ಕ್ ಪುತ್ತಿಲ, ಪುರಂದರ ಗೌಡ ಮತ್ತಿತರರು ಉಪಸ್ಥಿತರಿದ್ದರು

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

23 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

23 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

23 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

23 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

24 hours ago