Advertisement
ಸುದ್ದಿಗಳು

ಸೇವಾ ಯಜ್ಞದಲ್ಲಿ ಪುತ್ತಿಲ ಪರಿವಾರ | ಸುಳ್ಯದಲ್ಲಿ ಪ್ಲಾಸ್ಟಿಕ್ ಹೊದಿಕೆಯ ಮನೆ | ಮನೆ ನಿರ್ಮಿಸುವ ಯೋಜನೆ ಹಾಕಿಕೊಂಡ ಪುತ್ತಿಲ ಪರಿವಾರ |

Share

ಸಮಾಜಮುಖಿ ಕಾರ್ಯಗಳಲ್ಲಿ ಪುತ್ತಿಲ ಪರಿವಾರ ಮತ್ತಷ್ಟು ಸಕ್ರಿಯವಾಗಿದೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ಪುತ್ತಿಲ ಪರಿವಾರ ತೊಡಗಿಸಿಕೊಂಡಿದೆ. ಅಶಕ್ತರಿಗೆ ನೆರವಾಗುವ ಮೂಲಕ ಮಾನವೀಯ ಸೇವಾ ಕಾರ್ಯದಲ್ಲಿದೆ. ಇದೀಗ ಸುಳ್ಯದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಮಹಿಳೆಯೋರ್ವರು ಪ್ಲಾಸ್ಟಿಕ್ ಹೊದಿಕೆಯ ಮನೆಯಲ್ಲಿ ತನ್ನ ಮೂವರು ಮಕ್ಕಳ ಜೊತೆ ವಾಸಿಸುತಿದ್ದಾರೆ. ಇದಕ್ಕಾಗು ಶಾಶ್ವತ ಮನೆ ನಿರ್ಮಾಣ ಯೋಜನೆಯ ಗುರಿಯನ್ನು ಪುತ್ತಿಲ ಪರಿವಾರ ಇರಿಸಿಕೊಂಡಿದೆ.

ಸುಳ್ಯ ನಗರದ ಶಾಂತಿನಗರದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಮಹಿಳೆಯೋರ್ವರು ಪ್ಲಾಸ್ಟಿಕ್ ಹೊದಿಕೆಯ ಮನೆಯಲ್ಲಿ ತನ್ನ ಮೂವರು ಮಕ್ಕಳ ಜೊತೆ ವಾಸಿಸುತಿದ್ದರು. ಈ ಬಗ್ಗೆ ಮಾಹಿತಿ ಪಡೆದು ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಇವರ ಸಮಸ್ಯೆ ಬಗ್ಗೆ ಮಾತುಕತೆ ನಡೆಸಿ ಸುಳ್ಯ ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್ ಜೊತೆ ಮಾತನಾಡಿದರು. ಮನೆಗೆ ಸಂಬಂಧಿಸಿದ ದಾಖಲೆ ಪತ್ರಗಳ ಸಮಸ್ಯೆ ಇತ್ಯರ್ಥ ಆದ ತಕ್ಷಣ ಇಲಾಖೆಯ ಸಹಾಯದಿಂದ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಮನೆ ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದಾರೆ.

ಈ ಸಂದರ್ಭ ಅರುಣ್ ಕುಮಾರ್‌ ಪುತ್ತಿಲ ,ಸುಧಾಕರ್ ಬಾಟೋಳಿಮೂಲೆ ಅಲೆಟ್ಟಿ, ದಿನೇಶ್ ಅಡ್ಕಾರ್ ಸಹಿತ ಹಲವು ಪ್ರಮುಖರು ಇದ್ದರು.

ಇದೇ ವೇಳೆ ಪುತ್ತಿಲ ಪರಿವಾರದ ಸದಸ್ಯ ಮುಂಡೂರು ಗ್ರಾಮದ ಪುತ್ತಿಲ ನಿವಾಸಿಯಾಗಿರುವ ಸತೀಶ ಅವರಿಗೆ ಅನಾರೋಗ್ಯದ ನಿಮಿತ್ತ ಪುತ್ತಿಲ ಪರಿವಾರದ ಸೇವಾ ಸಮರ್ಪಣೆಯ ಭಾಗವಾಗಿ ಸಂಗ್ರಹಿಸಲಾದ ಸಹಾಯಧನವನ್ನು ಮಂಗಳವಾರ ವಿತರಣೆ ಮಾಡಲಾಗಿದೆ. ಪುತ್ತಿಲ ಪರಿವಾರದ ಸದಸ್ಯರು ಮನೆಗೆ ಭೇಟಿ ಮಾಡಿ ಸಹಾಯಧನವನ್ನು ಸತೀಶ್ ರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಸುದೀರ್ ಶೆಟ್ಟಿ ನೇಸರ, ಅನಿಲ್ ಕುಮಾರ್ ಕನ್ನಾರ್ನೂಜಿ, ಬಾಲಚಂದ್ರ ಸೊರಕೆ, ಅಶೋಕ್ ನಾಯ್ಕ್ ಪುತ್ತಿಲ, ಪ್ರಸಾದ್ ಪುತ್ತಿಲ, ಧನಂಜಯ ಕಲ್ಲಮ, ಜನಾರ್ಧನ ಎ, ಮೋನಪ್ಪ ಗೌಡ, ಹರೀಶ್ ನಾಯ್ಕ್ ಪುತ್ತಿಲ, ಪುರಂದರ ಗೌಡ ಮತ್ತಿತರರು ಉಪಸ್ಥಿತರಿದ್ದರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

12 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

23 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

23 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago