ಚುನಾವಣಾ ಪೂರ್ವದಲ್ಲಿ ಬಿಜೆಪಿ ಟಿಕೆಟ್ ವಿಚಾರದಲ್ಲಿ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣ ಪೂರ್ವ ವ್ಯವಹಾರವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಇದರಲ್ಲಿ ಪುತ್ತಿಲ ಪರಿವಾರದಲ್ಲಿ ಕೆಲಸ ಮಾಡಿರುವ ವ್ಯಕ್ತಿಯ ಹೆಸರು ಉಲ್ಲೇಖವಾಗಿರುವುದರಿಂದ ವೈಯಕ್ತಿಕ ವ್ಯವಹಾರಕ್ಕೂ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರು ಸ್ಪರ್ಧಿಸಿದರು.ಚುನಾವಣೆಯ ಸಂದರ್ಭ ಕೇವಲ 20 ದಿನದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ದುಡಿದಿರುವವರಲ್ಲಿ ನೇರಳಕಟ್ಟೆಯ ರಾಜಶೇಖರ್ ಕೋಟ್ಯಾನ್ ಕೂಡ ಒಬ್ಬರು.
ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಜಶೇಖರ್ ಕೋಟ್ಯಾನ್ ವಿರುದ್ಧ ಕೆಲವು ಆರೋಪಗಳು ಕೇಳಿ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ವಿಷಯ ಕರ್ನಾಟಕದ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣ ಪೂರ್ವ ವ್ಯವಹಾರವಾಗಿದ್ದು, ಆ ಆರೋಪದಲ್ಲಿ ಪುತ್ತಿಲ ಪರಿವಾರದ ಹೆಸರು ಪ್ರಸ್ತಾಪವಾಗಿರುವುದರಿಂದ ಈ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಬಂದ ದೂರಿನ ಪ್ರತಿಯಲ್ಲಿಯೂ ಪುತ್ತಿಲ ಪರಿವಾರದ ಬಗ್ಗೆ ಉಲ್ಲೇಖವಿಲ್ಲ. ಅವರ ವೈಯಕ್ತಿಕ ವ್ಯವಹಾರಕ್ಕೂ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ.
ಚುನಾವಣಾ ಪೂರ್ವದಲ್ಲಿ ನಡೆದಿರುವ ಈ ಘಟನೆಯ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ, ಹೀಗಿದ್ದರೂ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಸರಿಯಲ್ಲ ಎಂದು ಬೆಂಗಳೂರಿನ ಉದ್ಯಮಿ ಸ್ಪಷ್ಟನೆ ನೀಡಿದ್ದಾರೆ.
ಈ ನಡುವೆ ರಾಜಶೇಖರ ಕೋಟ್ಯಾನ್ ಅವರು ಕೂಡಾ ಪೊಲೀಸ್ ಠಾಣೆಗೆ ದೂರು ನೀಡಿ, ತೇಜೋವಧೆ ಮಾಡಲಾಗುತ್ತಿದೆ, ಯಾವುದೇ ದೂರು ದಾಖಲಾಗಿದ್ದರೂ ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…