The Rural Mirror ಕಾಳಜಿ

ಸಮಾಜಮುಖಿ ಚಿಂತನೆಯಲ್ಲಿ ಪುತ್ತಿಲ ಪರಿವಾರ | ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ಕ್ಯೂಆರ್ ಕೋಡ್ ಬಿಡುಗಡೆ

Share

ಪುತ್ತಿಲ ಪರಿವಾರ ಪ್ರಾರಂಭವಾಗಿ ಶತ ದಿನ ಕಳೆದಿದ್ದು, ಹಲವು ಸೇವಾ ಚಟುವಟಿಕೆಗಳನ್ನು ಪೂರೈಸಿದೆ. ಇದೀಗ ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ಸಮಾಜದ ದಾನಿಗಳಿಂದ ಕೊಡುಗೆಗಾಗಿ ಕ್ಯೂಆರ್ ಕೋಡ್ ಮತ್ತು ಅಕೌಂಟ್ ನಂಬರ್ ಬಿಡುಗಡೆ ಮಾಡಲಾಗಿದೆ.

Advertisement

ಪುತ್ತಿಲ ಪರಿವಾರವು ಚುನಾವಣೆಯಲ್ಲಿ ಉಳಿಕೆ ಹಣವನ್ನು ಹಲವು ಆನಾರೋಗ್ಯ ಪೀಡಿತರಿಗೆ, ಮಳೆಗಾಲದಲ್ಲಿ ಹಾನಿಯಾದ ಹಲವು ಮನೆಗಳಿಗೆ ವಿತರಿಸಿದ್ದು, ನಂತರ ಪುತ್ತಿಲ ಪರಿವಾರ ಪ್ರಾರಂಭವಾಗಿ ನೂರು ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದವರಿಗೆ, ಅಪಘಾತದಿಂದ ಗಾಯಗೊಂಡವರಿಗೆ, ಗೋಮಾತೆಯ ರಕ್ಷಣೆಗೆ , ವಿದ್ಯಾಭ್ಯಾಸಕ್ಕೆ ಸಹಾಯ ಸಹಿತ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಕಾರ್ಯಕರ್ತರಿಗೆ ಕಾನೂನಿನ ನೆರವಿನ ಸಹಾಯವನ್ನು ಪುತ್ತಿಲ ಪರಿವಾರದಿಂದ ಒದಗಿಸಲಿದೆ.

ಪುತ್ತಿಲ ಪರಿವಾರ ನಡೆಸುವ ಸೇವಾ ಸಮರ್ಪಣೆಗಳನ್ನು ಕಂಡು ನೂರಾರು ಜನ ತಮ್ಮಿಂದಾದ ಕೊಡುಗೆಗಳನ್ನು ನೀಡಲು ಮುಂದೆ ಬಂದಿದ್ದಾರೆ.ಆ ಕಾರಣಗಳಿಂದ ಸೇವಾ ಸಮರ್ಪಣೆಗಳಿಗೆ ನಿಮ್ಮ ಕೊಡುಗೆ ಎಂಬ ಯೋಜನೆಯನ್ವಯ ಕ್ಯೂಆರ್ ಕೋಡ್ ಮತ್ತು ಬ್ಯಾಂಕ್ ಖಾತೆ ನಂಬರ್ ಬಿಡುಗಡೆಗೊಳಿಸಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯೋರ್ವರಿಗೆ ವಿದ್ಯಾಭ್ಯಾಸಕ್ಕೆ ಸಹಾಯಕ್ಕಾಗಿ ಲ್ಯಾಪ್‌ಟಾಪ್ ನೀಡಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಇದರಲ್ಲಿ ಇರುವ ಖಾತೆ ನಂಬರ್ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಅವರ ಜಂಟಿ ಖಾತೆಯಾಗಿದ್ಧು, ಇದಕ್ಕೆ ಸಂದಾಯವಾಗುವ ಹಣದ ಸೇವಾ ಸಮರ್ಪಣೆಗೆ ಮಾತ್ರ ಉಪಯೋಗವಾಗಲಿದ್ದು, ಪ್ರತಿ 6 ತಿಂಗಳಿಗೊಮ್ಮೆ ವ್ಯಾವಹಾರಿಕ ಲೆಕ್ಕಾಚಾರ ಬಿಡುಗಡೆಯಾಗಲಿದೆ.

ಇಚ್ಚೆ ಇದ್ದವರು ತಮ್ಮಿಂದಾದ ನೆರವನ್ನು ಪುತ್ತಿಲ ಪರಿವಾರದ ಕ್ಯೂ ಆರ್ ಕೋಡ್ ಅಥವಾ ಖಾತೆ ನಂಬರ್ ಗೆ ಸಂದಾಯ ಮಾಡಬಹುದು ಎಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

30 minutes ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

47 minutes ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

60 minutes ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

1 hour ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

1 hour ago

ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…

2 hours ago