Advertisement
The Rural Mirror ಕಾಳಜಿ

ಸಮಾಜಮುಖಿ ಚಿಂತನೆಯಲ್ಲಿ ಪುತ್ತಿಲ ಪರಿವಾರ | ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ಕ್ಯೂಆರ್ ಕೋಡ್ ಬಿಡುಗಡೆ

Share

ಪುತ್ತಿಲ ಪರಿವಾರ ಪ್ರಾರಂಭವಾಗಿ ಶತ ದಿನ ಕಳೆದಿದ್ದು, ಹಲವು ಸೇವಾ ಚಟುವಟಿಕೆಗಳನ್ನು ಪೂರೈಸಿದೆ. ಇದೀಗ ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ಸಮಾಜದ ದಾನಿಗಳಿಂದ ಕೊಡುಗೆಗಾಗಿ ಕ್ಯೂಆರ್ ಕೋಡ್ ಮತ್ತು ಅಕೌಂಟ್ ನಂಬರ್ ಬಿಡುಗಡೆ ಮಾಡಲಾಗಿದೆ.

ಪುತ್ತಿಲ ಪರಿವಾರವು ಚುನಾವಣೆಯಲ್ಲಿ ಉಳಿಕೆ ಹಣವನ್ನು ಹಲವು ಆನಾರೋಗ್ಯ ಪೀಡಿತರಿಗೆ, ಮಳೆಗಾಲದಲ್ಲಿ ಹಾನಿಯಾದ ಹಲವು ಮನೆಗಳಿಗೆ ವಿತರಿಸಿದ್ದು, ನಂತರ ಪುತ್ತಿಲ ಪರಿವಾರ ಪ್ರಾರಂಭವಾಗಿ ನೂರು ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದವರಿಗೆ, ಅಪಘಾತದಿಂದ ಗಾಯಗೊಂಡವರಿಗೆ, ಗೋಮಾತೆಯ ರಕ್ಷಣೆಗೆ , ವಿದ್ಯಾಭ್ಯಾಸಕ್ಕೆ ಸಹಾಯ ಸಹಿತ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಕಾರ್ಯಕರ್ತರಿಗೆ ಕಾನೂನಿನ ನೆರವಿನ ಸಹಾಯವನ್ನು ಪುತ್ತಿಲ ಪರಿವಾರದಿಂದ ಒದಗಿಸಲಿದೆ.

ಪುತ್ತಿಲ ಪರಿವಾರ ನಡೆಸುವ ಸೇವಾ ಸಮರ್ಪಣೆಗಳನ್ನು ಕಂಡು ನೂರಾರು ಜನ ತಮ್ಮಿಂದಾದ ಕೊಡುಗೆಗಳನ್ನು ನೀಡಲು ಮುಂದೆ ಬಂದಿದ್ದಾರೆ.ಆ ಕಾರಣಗಳಿಂದ ಸೇವಾ ಸಮರ್ಪಣೆಗಳಿಗೆ ನಿಮ್ಮ ಕೊಡುಗೆ ಎಂಬ ಯೋಜನೆಯನ್ವಯ ಕ್ಯೂಆರ್ ಕೋಡ್ ಮತ್ತು ಬ್ಯಾಂಕ್ ಖಾತೆ ನಂಬರ್ ಬಿಡುಗಡೆಗೊಳಿಸಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯೋರ್ವರಿಗೆ ವಿದ್ಯಾಭ್ಯಾಸಕ್ಕೆ ಸಹಾಯಕ್ಕಾಗಿ ಲ್ಯಾಪ್‌ಟಾಪ್ ನೀಡಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಇದರಲ್ಲಿ ಇರುವ ಖಾತೆ ನಂಬರ್ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಅವರ ಜಂಟಿ ಖಾತೆಯಾಗಿದ್ಧು, ಇದಕ್ಕೆ ಸಂದಾಯವಾಗುವ ಹಣದ ಸೇವಾ ಸಮರ್ಪಣೆಗೆ ಮಾತ್ರ ಉಪಯೋಗವಾಗಲಿದ್ದು, ಪ್ರತಿ 6 ತಿಂಗಳಿಗೊಮ್ಮೆ ವ್ಯಾವಹಾರಿಕ ಲೆಕ್ಕಾಚಾರ ಬಿಡುಗಡೆಯಾಗಲಿದೆ.

ಇಚ್ಚೆ ಇದ್ದವರು ತಮ್ಮಿಂದಾದ ನೆರವನ್ನು ಪುತ್ತಿಲ ಪರಿವಾರದ ಕ್ಯೂ ಆರ್ ಕೋಡ್ ಅಥವಾ ಖಾತೆ ನಂಬರ್ ಗೆ ಸಂದಾಯ ಮಾಡಬಹುದು ಎಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

3 minutes ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

13 minutes ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

8 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

8 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago