Advertisement
The Rural Mirror ಕಾಳಜಿ

ಸಮಾಜಮುಖಿ ಚಿಂತನೆಯಲ್ಲಿ ಪುತ್ತಿಲ ಪರಿವಾರ | ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ಕ್ಯೂಆರ್ ಕೋಡ್ ಬಿಡುಗಡೆ

Share

ಪುತ್ತಿಲ ಪರಿವಾರ ಪ್ರಾರಂಭವಾಗಿ ಶತ ದಿನ ಕಳೆದಿದ್ದು, ಹಲವು ಸೇವಾ ಚಟುವಟಿಕೆಗಳನ್ನು ಪೂರೈಸಿದೆ. ಇದೀಗ ಪುತ್ತಿಲ ಪರಿವಾರದ ಸೇವಾ ಸಮರ್ಪಣೆಗೆ ಸಮಾಜದ ದಾನಿಗಳಿಂದ ಕೊಡುಗೆಗಾಗಿ ಕ್ಯೂಆರ್ ಕೋಡ್ ಮತ್ತು ಅಕೌಂಟ್ ನಂಬರ್ ಬಿಡುಗಡೆ ಮಾಡಲಾಗಿದೆ.

ಪುತ್ತಿಲ ಪರಿವಾರವು ಚುನಾವಣೆಯಲ್ಲಿ ಉಳಿಕೆ ಹಣವನ್ನು ಹಲವು ಆನಾರೋಗ್ಯ ಪೀಡಿತರಿಗೆ, ಮಳೆಗಾಲದಲ್ಲಿ ಹಾನಿಯಾದ ಹಲವು ಮನೆಗಳಿಗೆ ವಿತರಿಸಿದ್ದು, ನಂತರ ಪುತ್ತಿಲ ಪರಿವಾರ ಪ್ರಾರಂಭವಾಗಿ ನೂರು ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದವರಿಗೆ, ಅಪಘಾತದಿಂದ ಗಾಯಗೊಂಡವರಿಗೆ, ಗೋಮಾತೆಯ ರಕ್ಷಣೆಗೆ , ವಿದ್ಯಾಭ್ಯಾಸಕ್ಕೆ ಸಹಾಯ ಸಹಿತ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಕಾರ್ಯಕರ್ತರಿಗೆ ಕಾನೂನಿನ ನೆರವಿನ ಸಹಾಯವನ್ನು ಪುತ್ತಿಲ ಪರಿವಾರದಿಂದ ಒದಗಿಸಲಿದೆ.

ಪುತ್ತಿಲ ಪರಿವಾರ ನಡೆಸುವ ಸೇವಾ ಸಮರ್ಪಣೆಗಳನ್ನು ಕಂಡು ನೂರಾರು ಜನ ತಮ್ಮಿಂದಾದ ಕೊಡುಗೆಗಳನ್ನು ನೀಡಲು ಮುಂದೆ ಬಂದಿದ್ದಾರೆ.ಆ ಕಾರಣಗಳಿಂದ ಸೇವಾ ಸಮರ್ಪಣೆಗಳಿಗೆ ನಿಮ್ಮ ಕೊಡುಗೆ ಎಂಬ ಯೋಜನೆಯನ್ವಯ ಕ್ಯೂಆರ್ ಕೋಡ್ ಮತ್ತು ಬ್ಯಾಂಕ್ ಖಾತೆ ನಂಬರ್ ಬಿಡುಗಡೆಗೊಳಿಸಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯೋರ್ವರಿಗೆ ವಿದ್ಯಾಭ್ಯಾಸಕ್ಕೆ ಸಹಾಯಕ್ಕಾಗಿ ಲ್ಯಾಪ್‌ಟಾಪ್ ನೀಡಿ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಇದರಲ್ಲಿ ಇರುವ ಖಾತೆ ನಂಬರ್ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಅವರ ಜಂಟಿ ಖಾತೆಯಾಗಿದ್ಧು, ಇದಕ್ಕೆ ಸಂದಾಯವಾಗುವ ಹಣದ ಸೇವಾ ಸಮರ್ಪಣೆಗೆ ಮಾತ್ರ ಉಪಯೋಗವಾಗಲಿದ್ದು, ಪ್ರತಿ 6 ತಿಂಗಳಿಗೊಮ್ಮೆ ವ್ಯಾವಹಾರಿಕ ಲೆಕ್ಕಾಚಾರ ಬಿಡುಗಡೆಯಾಗಲಿದೆ.

ಇಚ್ಚೆ ಇದ್ದವರು ತಮ್ಮಿಂದಾದ ನೆರವನ್ನು ಪುತ್ತಿಲ ಪರಿವಾರದ ಕ್ಯೂ ಆರ್ ಕೋಡ್ ಅಥವಾ ಖಾತೆ ನಂಬರ್ ಗೆ ಸಂದಾಯ ಮಾಡಬಹುದು ಎಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

16 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

23 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

23 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago