Advertisement
ಸುದ್ದಿಗಳು

ಪುತ್ತೂರು ಬಾಲವನ ಉನ್ನತ ಕಲಾ ಕೇಂದ್ರವಾಗಿಸಲು ಒತ್ತಾಯ | ರಂಗಾಯಣದ ಐದನೇ ಘಟಕ ಬಾಲವನದಲ್ಲಾಗಲಿ |

Share

ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು  , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು  ಈ ತಂಡ ಒತ್ತಾಯಿಸಿದೆ.

ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

11 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

11 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

19 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

19 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago