ಸುದ್ದಿಗಳು

ಪುತ್ತೂರು ಬಾಲವನ ಉನ್ನತ ಕಲಾ ಕೇಂದ್ರವಾಗಿಸಲು ಒತ್ತಾಯ | ರಂಗಾಯಣದ ಐದನೇ ಘಟಕ ಬಾಲವನದಲ್ಲಾಗಲಿ |

Share

ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು  , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು  ಈ ತಂಡ ಒತ್ತಾಯಿಸಿದೆ.

ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

8 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

8 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

9 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

9 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

9 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

9 hours ago