ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು ಈ ತಂಡ ಒತ್ತಾಯಿಸಿದೆ.
ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…