Advertisement
ಸುದ್ದಿಗಳು

ಪುತ್ತೂರು ಬಾಲವನ ಉನ್ನತ ಕಲಾ ಕೇಂದ್ರವಾಗಿಸಲು ಒತ್ತಾಯ | ರಂಗಾಯಣದ ಐದನೇ ಘಟಕ ಬಾಲವನದಲ್ಲಾಗಲಿ |

Share

ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು  , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು  ಈ ತಂಡ ಒತ್ತಾಯಿಸಿದೆ.

ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

3 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

5 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

6 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago