ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು ಈ ತಂಡ ಒತ್ತಾಯಿಸಿದೆ.
ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…