ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

May 17, 2023
12:07 PM

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

Advertisement
Advertisement
Advertisement
Advertisement

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

Advertisement

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

Advertisement

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ರಾಜ್ಯದ ವಿವಿಧೆಡೆ ತೊಗರಿಬೆಳೆಗೆ ರೋಗಬಾಧೆ | ಪರಿಹಾರ ನೀಡುವಂತೆ ಬಿಜೆಪಿ ಆಗ್ರಹ
December 5, 2024
7:08 AM
by: The Rural Mirror ಸುದ್ದಿಜಾಲ
ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |
November 27, 2024
9:13 PM
by: The Rural Mirror ಸುದ್ದಿಜಾಲ
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು  ಅಧಿಕಾರಿಗಳಿಗೆ ಸೂಚಿಸಲಾಗಿದೆ | ಸಚಿವ ಕೆ.ಎಚ್. ಮುನಿಯಪ್ಪ
November 27, 2024
6:47 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror