Advertisement
Local mirror

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

10 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

10 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

10 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

10 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

10 hours ago