Advertisement
Local mirror

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

6 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

1 day ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 days ago