Advertisement
Local mirror

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

14 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

14 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

14 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

14 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago