Advertisement
Local mirror

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

5 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

14 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

21 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago