Advertisement
Local mirror

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರ | ಕಾರ್ಯಕರ್ತರಿಗೆ “ಶಿಕ್ಷೆ” ನೀಡಿದ ಬಿಜೆಪಿ…! |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ಒಟ್ಟು 9 ಮಂದಿ ವಿಚಾರಣೆ ನಡೆಸಿದ್ದು 7 ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಬಿಜೆಪಿ ಕಾರ್ಯಕರ್ತರೇ ಆಗಿದ್ದರು. ಇದೀಗ ಇವರಲ್ಲಿ ಕೆಲವರನ್ನು ಪೊಲೀಸರು ಬೆಂಡೆತ್ತಿದ್ದಾರೆ. ಚುನಾವಣೆ ಮೊದಲೂ ಬಿಜೆಪಿ ಕಾರ್ಯಕರ್ತರಿಗೆ ಶಿಕ್ಷೆ, ಈಗಲೂ “ಶಿಕ್ಷೆ”ಯಾಗಿದೆ…!.

ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ ಮತ್ತು ಮಾಧವ ಎಂಬವರನ್ನು ಸೋಮವಾರ ಬಂಧಿಸಿದ್ದು. ಮತ್ತೆ ಉಳಿದ  ಅವಿನಾಶ್ , ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಹೆಚ್ಚಿನವರು ಬಿಜೆಪಿ ಕಾರ್ಯಕರ್ತರಾಗಿದ್ದು  ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಇವರಲ್ಲಿ ಮೂರು ಮಂದಿ ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು.

ಬಿಜೆಪಿ ಸೋಲಿಗೆ  ಡಿವಿ ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿದ ಅಳವಡಿಸಿದ್ದರು. ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಿ ಎಂದು ಸ್ಥಳೀಯರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಬಂಧಿಸಿ ಕೆಲವೇ ಹೊತ್ತಲ್ಲಿ ಯದ್ವಾತದ್ವ ಹಲ್ಲೆ ನಡೆಸಿದ್ದಾರೆ. ಇದೀಗ ಮಾನವ ಹಕ್ಕುಗಳವರೆಗೂ ಈ ಪ್ರಕರಣ ಹೋಗುವ ಸಾಧ್ಯತೆ ಇದೆ.

ಘಟನೆ ತಿಳಿದ  ಅರುಣ್ ಪುತ್ತಿಲ  ಠಾಣೆಗೆ ತೆರಳಿ ಎಲ್ಲರನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳಿಂದ ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿ ಕೊಟ್ಟಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

37 minutes ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

59 minutes ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

12 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

16 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

21 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago