ಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

April 11, 2025
8:32 PM

ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಘಟಕವನ್ನು ಪ್ರಾರಂಭಿಸಲಾಗಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ…..ಮುಂದೆ ಓದಿ….

ಮಣ್ಣು ಪರೀಕ್ಷಾ ಯಂತ್ರವು ಮಣ್ಣಿನಲ್ಲಿರುವ 12 ಪ್ರಮುಖ ಪೋಷಕಾಂಶಗಳನ್ನು ವಿಶ್ಲೇಷಿಸುವ ಜೊತೆಗೆ ಪೋಷಕಾಂಶಗಳ ನಿರ್ವಹಣೆಗೆ ಸಂಕ್ಷಿಪ್ತ ಶಿಫಾರಸುಗಳನ್ನು ನೀಡುತ್ತದೆ.  ರೈತರು ಮಣ್ಣಿನ ಪೋಷಕಾಂಶಗಳ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ನಿಖರವಾದ ಮಣ್ಣಿನ ಪರೀಕ್ಷೆಯ ಮೂಲಕ ಸಮತೋಲಿತ ಪೋಷಕಾಂಶಗಳ ನಿರ್ವಹಣೆ ಮಾಡುವುದು ಅತ್ಯಗತ್ಯ. ಈ ಉತ್ತಮವಾದ ಸೇವೆಯನ್ನು ಕ್ಯಾಂಪ್ಕೊ ಸದಸ್ಯರುಗಳೆಲ್ಲ ಸದುಪಯೋಗ ಮಾಡಿಕೊಳ್ಳಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷ  ಕಿಶೋರ್ ಕುಮಾರ್ ಕೊಡ್ಗಿಯವರು ಮನವಿ ಮಾಡಿರುತ್ತಾರೆ.

ಮಣ್ಣಿನ ಪರೀಕ್ಷೆ ಯಂತ್ರದ ಉದ್ಘಾಟನೆಯನ್ನು ಪ್ರ ಗತಿಪರ ಕೃಷಿಕ ಸುರೇಶ್ ಬಲ್ನಾಡು ನೆರವೇರಿಸಿದರು. ಕ್ಯಾಂಪ್ಕೊ ಅಧ್ಯಕ್ಷ , ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ, ನಿರ್ದೇಶಕ ರಾಘವೇಂದ್ರ ಭಟ್, ಎ.ಆರ್.ಡಿ.ಎಫ್‌ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್, ಕ್ಯಾಂಪ್ಕೊ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror