ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಘಟಕವನ್ನು ಪ್ರಾರಂಭಿಸಲಾಗಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ…..ಮುಂದೆ ಓದಿ….
ಮಣ್ಣು ಪರೀಕ್ಷಾ ಯಂತ್ರವು ಮಣ್ಣಿನಲ್ಲಿರುವ 12 ಪ್ರಮುಖ ಪೋಷಕಾಂಶಗಳನ್ನು ವಿಶ್ಲೇಷಿಸುವ ಜೊತೆಗೆ ಪೋಷಕಾಂಶಗಳ ನಿರ್ವಹಣೆಗೆ ಸಂಕ್ಷಿಪ್ತ ಶಿಫಾರಸುಗಳನ್ನು ನೀಡುತ್ತದೆ. ರೈತರು ಮಣ್ಣಿನ ಪೋಷಕಾಂಶಗಳ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ನಿಖರವಾದ ಮಣ್ಣಿನ ಪರೀಕ್ಷೆಯ ಮೂಲಕ ಸಮತೋಲಿತ ಪೋಷಕಾಂಶಗಳ ನಿರ್ವಹಣೆ ಮಾಡುವುದು ಅತ್ಯಗತ್ಯ. ಈ ಉತ್ತಮವಾದ ಸೇವೆಯನ್ನು ಕ್ಯಾಂಪ್ಕೊ ಸದಸ್ಯರುಗಳೆಲ್ಲ ಸದುಪಯೋಗ ಮಾಡಿಕೊಳ್ಳಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಮನವಿ ಮಾಡಿರುತ್ತಾರೆ.
ಮಣ್ಣಿನ ಪರೀಕ್ಷೆ ಯಂತ್ರದ ಉದ್ಘಾಟನೆಯನ್ನು ಪ್ರ ಗತಿಪರ ಕೃಷಿಕ ಸುರೇಶ್ ಬಲ್ನಾಡು ನೆರವೇರಿಸಿದರು. ಕ್ಯಾಂಪ್ಕೊ ಅಧ್ಯಕ್ಷ , ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ, ನಿರ್ದೇಶಕ ರಾಘವೇಂದ್ರ ಭಟ್, ಎ.ಆರ್.ಡಿ.ಎಫ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್, ಕ್ಯಾಂಪ್ಕೊ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…