ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ ನೀಡುವ ಉದ್ದೇಶದಿಂದ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಘಟಕವನ್ನು ಪ್ರಾರಂಭಿಸಲಾಗಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ…..ಮುಂದೆ ಓದಿ….
ಮಣ್ಣು ಪರೀಕ್ಷಾ ಯಂತ್ರವು ಮಣ್ಣಿನಲ್ಲಿರುವ 12 ಪ್ರಮುಖ ಪೋಷಕಾಂಶಗಳನ್ನು ವಿಶ್ಲೇಷಿಸುವ ಜೊತೆಗೆ ಪೋಷಕಾಂಶಗಳ ನಿರ್ವಹಣೆಗೆ ಸಂಕ್ಷಿಪ್ತ ಶಿಫಾರಸುಗಳನ್ನು ನೀಡುತ್ತದೆ. ರೈತರು ಮಣ್ಣಿನ ಪೋಷಕಾಂಶಗಳ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ನಿಖರವಾದ ಮಣ್ಣಿನ ಪರೀಕ್ಷೆಯ ಮೂಲಕ ಸಮತೋಲಿತ ಪೋಷಕಾಂಶಗಳ ನಿರ್ವಹಣೆ ಮಾಡುವುದು ಅತ್ಯಗತ್ಯ. ಈ ಉತ್ತಮವಾದ ಸೇವೆಯನ್ನು ಕ್ಯಾಂಪ್ಕೊ ಸದಸ್ಯರುಗಳೆಲ್ಲ ಸದುಪಯೋಗ ಮಾಡಿಕೊಳ್ಳಬೇಕಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಮನವಿ ಮಾಡಿರುತ್ತಾರೆ.
ಮಣ್ಣಿನ ಪರೀಕ್ಷೆ ಯಂತ್ರದ ಉದ್ಘಾಟನೆಯನ್ನು ಪ್ರ ಗತಿಪರ ಕೃಷಿಕ ಸುರೇಶ್ ಬಲ್ನಾಡು ನೆರವೇರಿಸಿದರು. ಕ್ಯಾಂಪ್ಕೊ ಅಧ್ಯಕ್ಷ , ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ, ನಿರ್ದೇಶಕ ರಾಘವೇಂದ್ರ ಭಟ್, ಎ.ಆರ್.ಡಿ.ಎಫ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್, ಕ್ಯಾಂಪ್ಕೊ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…