Advertisement
MIRROR FOCUS

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

Share

 ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಾಣಿಯೂರು, ಪುಣ್ಚತ್ತಾರು, ಬೆಳ್ಳಾರೆ, ಉಪ್ಪಿನಂಗಡಿ, ಪೆರ್ಲಂಪಾಡಿ, ಉಬರಡ್ಕ ಹಾಗೂ ಪಂಜ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯೊಂದಿಗೆ ಗಾಳಿ ಮತ್ತು ಗುಡುಗು ಸಹಿತ ಮಳೆ ಸುರಿದಿದೆ.

ಕೆಲವು ಪ್ರದೇಶಗಳಲ್ಲಿ ಮೊದಲಿಗೆ ಬಿರುಸಿನ ಗಾಳಿ ಬೀಸಿದ ನಂತರ ಮಳೆಯಾಗಿದೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಕೆಲ ನಿಮಿಷಗಳ ಕಾಲ ಉತ್ತಮ ಪ್ರಮಾಣದಲ್ಲಿ ಸುರಿದರೆ, ಇನ್ನೂ ಕೆಲವು ಕಡೆ ತುಂತುರು ಮಳೆಯಾಗಿ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಬಿಸಿಲು ಮತ್ತು ಸೆಖೆಯಿಂದ ಬಳಲುತ್ತಿದ್ದ ಜನತೆಗೆ ಈ ಮಳೆ ತಾತ್ಕಾಲಿಕ ತಂಪಿನ ಅನುಭವವನ್ನು ನೀಡಿದೆ. ಮಧ್ಯಾಹ್ನ ವೇಳೆಗೆ ಬಿಸಿಲು ತೀವ್ರವಾಗಿದ್ದರೂ, ಸಂಜೆ ವೇಳೆಗೆ ಮೋಡ ಕವಿದು ಮಳೆ ಸುರಿದ ಪರಿಣಾಮ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯ ಪರಿಣಾಮವಾಗಿ ಕೆಲವೆಡೆ ಮರದ ಕೊಂಬೆಗಳು ಬಿದ್ದಿರುವ ಮಾಹಿತಿ ದೊರೆತಿದ್ದು, ಆದರೆ ಯಾವುದೇ ದೊಡ್ಡ ಹಾನಿಯ ವರದಿ ಲಭ್ಯವಾಗಿಲ್ಲ. ಈ ಮಳೆ ಅಡಿಕೆ, ಕಾಳುಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳಿಗೆ ಸಂಕಷ್ಟವಾಗಿದೆ.  ಬಿಸಿಲಿನಿಂದ ಒಣಗುತ್ತಿದ್ದ ಮಣ್ಣಿಗೆ ತೇವಾಂಶ ದೊರಕಿದ್ದು, ತೋಟಗಳಿಗೆ ಸ್ವಲ್ಪ ಮಟ್ಟಿನ  ತೇವಾಂಶ ಒದಗಿಸಿದೆ. ಆದರೆ ಅಡಿಕೆ ಬೆಳೆಗಾರರಿಗೆ ಅಡಿಕೆ ಒಣಗಿಸಲು ಕಷ್ಟವಾಗಿದೆ.

ಮುಂದಿನ ದಿನಗಳಲ್ಲಿ ಮತ್ತೆ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ತೋಟ ನಿರ್ವಹಣೆ ಮತ್ತು ನೀರಾವರಿ ಕ್ರಮಗಳನ್ನು ಹವಾಮಾನವನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ ಎಂದು ಕೃಷಿ ತಜ್ಞರು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Thunderstorms accompanied by gusty winds and rainfall were reported in several parts of Puttur taluk in Dakshina Kannada district, including Kaniyooru, Bellare, Punjaththaru, Uppinangady, Perlampady, Ubaradka, and Panja. The rain brought relief from recent heat and helped improve soil moisture, benefiting plantation crops. No major damage has been reported so far.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

19 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago