Advertisement
MIRROR FOCUS

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

Share

 ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಾಣಿಯೂರು, ಪುಣ್ಚತ್ತಾರು, ಬೆಳ್ಳಾರೆ, ಉಪ್ಪಿನಂಗಡಿ, ಪೆರ್ಲಂಪಾಡಿ, ಉಬರಡ್ಕ ಹಾಗೂ ಪಂಜ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯೊಂದಿಗೆ ಗಾಳಿ ಮತ್ತು ಗುಡುಗು ಸಹಿತ ಮಳೆ ಸುರಿದಿದೆ.

ಕೆಲವು ಪ್ರದೇಶಗಳಲ್ಲಿ ಮೊದಲಿಗೆ ಬಿರುಸಿನ ಗಾಳಿ ಬೀಸಿದ ನಂತರ ಮಳೆಯಾಗಿದೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಕೆಲ ನಿಮಿಷಗಳ ಕಾಲ ಉತ್ತಮ ಪ್ರಮಾಣದಲ್ಲಿ ಸುರಿದರೆ, ಇನ್ನೂ ಕೆಲವು ಕಡೆ ತುಂತುರು ಮಳೆಯಾಗಿ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಬಿಸಿಲು ಮತ್ತು ಸೆಖೆಯಿಂದ ಬಳಲುತ್ತಿದ್ದ ಜನತೆಗೆ ಈ ಮಳೆ ತಾತ್ಕಾಲಿಕ ತಂಪಿನ ಅನುಭವವನ್ನು ನೀಡಿದೆ. ಮಧ್ಯಾಹ್ನ ವೇಳೆಗೆ ಬಿಸಿಲು ತೀವ್ರವಾಗಿದ್ದರೂ, ಸಂಜೆ ವೇಳೆಗೆ ಮೋಡ ಕವಿದು ಮಳೆ ಸುರಿದ ಪರಿಣಾಮ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯ ಪರಿಣಾಮವಾಗಿ ಕೆಲವೆಡೆ ಮರದ ಕೊಂಬೆಗಳು ಬಿದ್ದಿರುವ ಮಾಹಿತಿ ದೊರೆತಿದ್ದು, ಆದರೆ ಯಾವುದೇ ದೊಡ್ಡ ಹಾನಿಯ ವರದಿ ಲಭ್ಯವಾಗಿಲ್ಲ. ಈ ಮಳೆ ಅಡಿಕೆ, ಕಾಳುಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳಿಗೆ ಸಂಕಷ್ಟವಾಗಿದೆ.  ಬಿಸಿಲಿನಿಂದ ಒಣಗುತ್ತಿದ್ದ ಮಣ್ಣಿಗೆ ತೇವಾಂಶ ದೊರಕಿದ್ದು, ತೋಟಗಳಿಗೆ ಸ್ವಲ್ಪ ಮಟ್ಟಿನ  ತೇವಾಂಶ ಒದಗಿಸಿದೆ. ಆದರೆ ಅಡಿಕೆ ಬೆಳೆಗಾರರಿಗೆ ಅಡಿಕೆ ಒಣಗಿಸಲು ಕಷ್ಟವಾಗಿದೆ.

ಮುಂದಿನ ದಿನಗಳಲ್ಲಿ ಮತ್ತೆ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ತೋಟ ನಿರ್ವಹಣೆ ಮತ್ತು ನೀರಾವರಿ ಕ್ರಮಗಳನ್ನು ಹವಾಮಾನವನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ ಎಂದು ಕೃಷಿ ತಜ್ಞರು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Thunderstorms accompanied by gusty winds and rainfall were reported in several parts of Puttur taluk in Dakshina Kannada district, including Kaniyooru, Bellare, Punjaththaru, Uppinangady, Perlampady, Ubaradka, and Panja. The rain brought relief from recent heat and helped improve soil moisture, benefiting plantation crops. No major damage has been reported so far.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago