Advertisement
MIRROR FOCUS

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

Share

 ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಕಾಣಿಯೂರು, ಪುಣ್ಚತ್ತಾರು, ಬೆಳ್ಳಾರೆ, ಉಪ್ಪಿನಂಗಡಿ, ಪೆರ್ಲಂಪಾಡಿ, ಉಬರಡ್ಕ ಹಾಗೂ ಪಂಜ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯೊಂದಿಗೆ ಗಾಳಿ ಮತ್ತು ಗುಡುಗು ಸಹಿತ ಮಳೆ ಸುರಿದಿದೆ.

ಕೆಲವು ಪ್ರದೇಶಗಳಲ್ಲಿ ಮೊದಲಿಗೆ ಬಿರುಸಿನ ಗಾಳಿ ಬೀಸಿದ ನಂತರ ಮಳೆಯಾಗಿದೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಕೆಲ ನಿಮಿಷಗಳ ಕಾಲ ಉತ್ತಮ ಪ್ರಮಾಣದಲ್ಲಿ ಸುರಿದರೆ, ಇನ್ನೂ ಕೆಲವು ಕಡೆ ತುಂತುರು ಮಳೆಯಾಗಿ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಬಿಸಿಲು ಮತ್ತು ಸೆಖೆಯಿಂದ ಬಳಲುತ್ತಿದ್ದ ಜನತೆಗೆ ಈ ಮಳೆ ತಾತ್ಕಾಲಿಕ ತಂಪಿನ ಅನುಭವವನ್ನು ನೀಡಿದೆ. ಮಧ್ಯಾಹ್ನ ವೇಳೆಗೆ ಬಿಸಿಲು ತೀವ್ರವಾಗಿದ್ದರೂ, ಸಂಜೆ ವೇಳೆಗೆ ಮೋಡ ಕವಿದು ಮಳೆ ಸುರಿದ ಪರಿಣಾಮ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

Advertisement

ಗ್ರಾಮೀಣ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯ ಪರಿಣಾಮವಾಗಿ ಕೆಲವೆಡೆ ಮರದ ಕೊಂಬೆಗಳು ಬಿದ್ದಿರುವ ಮಾಹಿತಿ ದೊರೆತಿದ್ದು, ಆದರೆ ಯಾವುದೇ ದೊಡ್ಡ ಹಾನಿಯ ವರದಿ ಲಭ್ಯವಾಗಿಲ್ಲ. ಈ ಮಳೆ ಅಡಿಕೆ, ಕಾಳುಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳಿಗೆ ಸಂಕಷ್ಟವಾಗಿದೆ.  ಬಿಸಿಲಿನಿಂದ ಒಣಗುತ್ತಿದ್ದ ಮಣ್ಣಿಗೆ ತೇವಾಂಶ ದೊರಕಿದ್ದು, ತೋಟಗಳಿಗೆ ಸ್ವಲ್ಪ ಮಟ್ಟಿನ  ತೇವಾಂಶ ಒದಗಿಸಿದೆ. ಆದರೆ ಅಡಿಕೆ ಬೆಳೆಗಾರರಿಗೆ ಅಡಿಕೆ ಒಣಗಿಸಲು ಕಷ್ಟವಾಗಿದೆ.

ಮುಂದಿನ ದಿನಗಳಲ್ಲಿ ಮತ್ತೆ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ತೋಟ ನಿರ್ವಹಣೆ ಮತ್ತು ನೀರಾವರಿ ಕ್ರಮಗಳನ್ನು ಹವಾಮಾನವನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ ಎಂದು ಕೃಷಿ ತಜ್ಞರು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Thunderstorms accompanied by gusty winds and rainfall were reported in several parts of Puttur taluk in Dakshina Kannada district, including Kaniyooru, Bellare, Punjaththaru, Uppinangady, Perlampady, Ubaradka, and Panja. The rain brought relief from recent heat and helped improve soil moisture, benefiting plantation crops. No major damage has been reported so far.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

20 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

21 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago