ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಪಾಲ್ಗೊಂಡರು. ತರಗತಿಯ ಮೊದಲ ದಿನವೇ 25ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು. ಸುಪ್ರಭಾ ಅವರು ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್ ಅವರು ತರಗತಿ ನಡೆಸಿಕೊಟ್ಟರು. ಮುಳಿಯ ಜ್ಯುವೆಲ್ಸ್ನ ಎಲ್ಲ ಅಧಿಕಾರಿ- ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಐಯ್ತಪ್ಪ ನಾಯ್ಕ , ರಾಮದಾಸ್ ಗೌಡ ಉಪಸ್ಥಿತರಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…